ರಾಜ್ಯದಲ್ಲಿ ಕೊರೊನಾ ಸೋಂಕು ವ್ಯಾಪಿಸುತ್ತಿರುವ ಹಿನ್ನೆಲೆ ಮೇ.15ರವರೆಗೆ ಲಾಕ್ ಡೌನ್ ಮುಂದುವರೆಸುವುದು ಸೂಕ್ತ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಇಂದು ಪ್ರಧಾನಿ ನರೇಂದ್ರ ಮೋದಿ ಜೊತೆಗೆ ನಡೆದ ವಿಡಿಯೋ ಸಂವಾದದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲೇ ಮೇ.3ರ ಬಳಿಕ ಮತ್ತೆ ಲಾಕ್ ಡೌನ್ ಮುಂದುವರೆಸುವುದು ಸೂಕ್ತ. ಮೇ.15ರವರೆಗೆ ಲಾಕ್ ಡೌನ್ ವಿಸ್ತರಿಸಿದರೆ ಒಳಿತು. ಕೇಂದ್ರದ ನಿರ್ಧಾರಗಳಿಗೆ ರಾಜ್ಯ ಸರ್ಕಾರ ಸಂಪೂರ್ಣ ಬೆಂಬಲ ಸೂಚಿಸಿದೆ. ಆದರೆ, ಸದ್ಯದ ಆರ್ಥಿಕ ಪರಿಸ್ಥಿತಿ ನಿಟ್ಟಿನಲ್ಲಿ ಆರೆಂಜ್ ಹಾಗೂ ಗ್ರೀನ್ ಝೋನ್ ಗಳಿಗೆ ಕೆಲವೊಂದು ವಿನಾಯಿತಿ ನೀಡುವಂತೆ ಪ್ರಧಾನಿ ಬಳಿ ಮನವಿ ಮಾಡಲಾಗಿದೆ. ಇದೇ ವೇಳೆ, ಸದ್ಯಕ್ಕೆ ರಾಜ್ಯದಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ನೀಡುವುದಿಲ್ಲ ಎಂದು ಹೇಳಿದರು
ಮೇ.15ರವರೆಗೆ ಲಾಕ್ ಡೌನ್ ಮುಂದುವರೆಕೆ ಸೂಕ್ತ..! :ಬಿಎಸ್ ವೈ
Please follow and like us: