ಮೇ 4ರಿಂದ ಬಸ್ ಸಂಚಾರಕ್ಕೆ ಅನುಮತಿ…!

ರೆಡ್ ಝೋನ್ ಅಲ್ಲದ ತಾಲೂಕುಗಳಲ್ಲಿ ಮೇ 4ರಿಂದ ಬಸ್ ಸಂಚಾರಕ್ಕೆ ಅನುಮತಿ ನೀಡುತ್ತೇವೆ ಎಂದು ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ.ಬೆಳಗಾವಿಯಲ್ಲಿ  ಮಾತನಾಡಿದ ಅವರು, ತಾಲೂಕುವಾರು ಕೊರೊನಾ ಹಾಟ್‍ಸ್ಟಾಟ್‍ಗಳನ್ನು ಗುರುತಿಸಲಾಗಿದೆ. ಕೊರೊನಾ ಸೋಂಕು ಇರುವ ತಾಲೂಕುಗಳಲ್ಲಿ ಸಾರಿಗೆ ಸಂಚಾರ ಇರುವುದಿಲ್ಲ. ಅವುಗಳನ್ನು ಬಿಟ್ಟು ಉಳಿದ ತಾಲೂಕುಗಳಲ್ಲಿ ಗ್ರಾಮೀಣ ಭಾಗಕ್ಕೂ ಸೇರಿ ಸಾರಿಗೆ ವ್ಯವಸ್ಥೆಯನ್ನು ಮೇ 4ರಿಂದ ಮಾಡುತ್ತೇವೆ ಎಂದು ಹೇಳಿದರು. ಇದೇ ವೇಳೆ ವಲಸೆ ಕಾರ್ಮಿಕರಿಂದ ಕೆ.ಎಸ್.ಆರ್.ಟಿ.ಸಿ ಬಸ್‍ಗಳಲ್ಲಿ ದುಪ್ಪಟ್ಟು ದರ ವಸೂಲಿ ವಿಚಾರವಾಗಿ ಮಾತನಾಡಿದ ಅವರು, ಇದು ತಪ್ಪು ಕಲ್ಪನೆಯಿಂದ ಆಗಿದೆ. ಕಾರ್ಮಿಕರ ಹಿತದೃಷ್ಟಿಯಿಂದ ಸಿಂಗಲ್ ಫೇರ್ ತಗೆದುಕೊಂಡು ಕಳುಹಿಸುವ ವ್ಯವಸ್ಥೆ ಮಾಡಲಾಗಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಬಸ್‍ನಲ್ಲಿ ಕಡಿಮೆ ಜನರನ್ನು ಕಳಿಸಬೇಕಾಗುತ್ತೆ. ಕಾರ್ಮಿಕರನ್ನು ಅವರ ಊರಿಗೆ ಬಿಟ್ಟು ವಾಪಸ್ ಬರುವಾಗ ಖಾಲಿ ಬರಬೇಕಾಗುತ್ತೆ. ಆದರೂ ಈ ಹೊರೆ ಸಹಿಸಿಕೊಂಡು ನಿಗದಿತ ದರವನ್ನು ಪಡೆಯಲಾಗುತ್ತೆ ಎಂದರು.ವಲಸೆ ಕಾರ್ಮಿಕರಿಗೆ ಉಚಿತ ಸಾರಿಗೆ ವ್ಯವಸ್ಥೆ ಕಲ್ಪಿಸಬೇಕೆಂಬ ಬೇಡಿಕೆ ವಿಚಾರವಾಗಿ ಮಾತನಾಡಿದ ಅವರು, ಈಗಾಗಲೇ ಕಾರ್ಮಿಕ ಇಲಾಖೆಯಿಂದ ಕಾರ್ಮಿಕರಿಗೆ ಸಹಾಯ ಮಾಡಿದ್ದೇವೆ ಎಂದು ಹೇಳಿದರು.

 

Please follow and like us:

Leave a Reply

Your email address will not be published. Required fields are marked *

Next Post

ಒನ್ ಡೌನ್ ನಲ್ಲಿ ಆಡ್ತಾರ ಬೂಮ್ರಾ…!?

Sat May 2 , 2020
ಭಾರತದ ಮಾಜಿ ಕ್ರಿಕೆಟಿಗ ಆಕಾಶ್​ ಚೋಪ್ರಾ ತಮ್ಮ ನೆಚ್ಚಿನ ಇಲೆವೆನ್​ ತಂಡವನ್ನು ಆಯ್ಕೆ ಮಾಡಿದ್ದು, ಅದರಲ್ಲಿ 3ನೇ ಕ್ರಮಾಂಕದಲ್ಲಿ ಆಡುವ ಭಾರತ ತಂಡದ ನಾಯಕ ವಿರಾಟ್​ ಕೊಹ್ಲಿ ಹಾಗೂ ರೋಹಿತ್​ ಶರ್ಮಾರನ್ನು ಕೈಬಿಟ್ಟು ವೇಗಿ ಜಸ್ಪ್ರೀತ್​ ಬುಮ್ರಾರನ್ನು ಆಯ್ಕೆ ಮಾಡಿ ಅಚ್ಚರಿ ಮೂಡಿಸಿದ್ದಾರೆ. ಟಿ20 ಕ್ರಿಕೆಟ್​ನಲ್ಲಿ 4 ಶತಕ ಸಿಡಿಸಿರುವ ವಿಶ್ವದ ಏಕೈಕ ಬ್ಯಾಟ್ಸ್​ಮನ್​ ಆಗಿರುವ ರೋಹಿತ್​ ಶರ್ಮಾ ಹಾಗೂ ಟಿ20 ಕ್ರಿಕೆಟ್​ನಲ್ಲಿ ಅತಿ ಹೆಚ್ಚು ರನ್​ ಬಾರಿಸಿರುವ ಕೊಹ್ಲಿಗೆ […]

Advertisement

Wordpress Social Share Plugin powered by Ultimatelysocial