ಸಾವಿರಾರು ಕೋಟಿ ಮೌಲ್ಯದ ಮೈಶುಗರ್ ಕಾರ್ಖಾನೆಯನ್ನು ಯಾವುದೇ ಕಾರಣಕ್ಕೂ ಖಾಸಗಿ ವ್ಯಕ್ತಿಗಳಿಗೆ ಮಾರಾಟ ಮಾಡಬಾರದು. ಸರ್ಕಾರವೆ ಬಂಡವಾಳ ಹೂಡಿ ಆಧುನೀಕರಿಸಿ, ಬಲಪಡಿಸಬೇಕು ಎಂದು ಆಗ್ರಹಿಸಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ಮೈಶುಗರ್ ಕಾರ್ಖಾನೆಯಲ್ಲಿ ಸುಮಾರು ೧೪,೦೪೬ ರೈತರು ಷೇರುದಾರರಿದ್ದಾರೆ. ನಿತ್ಯ ೫ಸಾವಿರ ಟನ್ ಕಬ್ಬು ಅರೆಯುವ ಸಾಮರ್ಥ್ಯ ಈ ಕಾರ್ಖಾನೆಗಿದೆ. ಈ ಹಿಂದೆ ಸುಮಾರು ೨೨೯.೬೫ ಕೋಟಿ ರೂ. ನೀಡಿ ಕಾರ್ಖಾನೆಯನ್ನು ಪುನಶ್ಚೇತನಗೊಳಿಸಲು ಪ್ರಯತ್ನಿಸಲಾಗಿತ್ತು. ಇದೀಗ ಈ ಕಾರ್ಖಾನೆಯನ್ನು ಖಾಸಗಿಯವರೆಗೆ ಮಾರಾಟ ಮಾಡಲು ರಾಜ್ಯ ಸರ್ಕಾರ ಮುಂದಾಗಿರುವುದು ದುರದೃಷ್ಟಕರ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ಮೈಶುಗರ್ ಕಾರ್ಖಾನೆ ಖಾಸಗೀಕರಣ ಬೇಡ /ಮುಖ್ಯಮಂತ್ರಿಗೆ ಸಿದ್ದರಾಮಯ್ಯ ಮನವಿ
Please follow and like us: