ಕೊರೊನಾ ಸೋಂಕು ಪೀಡಿತರ ಸಂಖ್ಯೆ ಮೈಸೂರಿನಲ್ಲಿ ಹೆಚ್ಚಿರುವ ಹಿನ್ನೆಲೆ ರೆಡ್ ಝೋನ್ ಇದೆ , ಜಿಲ್ಲೆಯಲ್ಲಿ ಯಾವುದೇ ರೀತಿ ಸಡಿಲಿಕೆ ಇಲ್ಲ ಎಂದು ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಮೆಡಿಕಲ್ ಎಮರ್ಜೆನ್ಸಿಯಂತಹ ತುರ್ತು ಪರಿಸ್ಥಿತಿಗಳಿಗೆ ಮಾತ್ರ ಓಡಾಟಕ್ಕೆ ಅನುಮತಿ ಕೊಡಲಾಗಿದೆ. ಕೃಷಿ ಚಟುವಟಿಕೆಗೆ ಈಗಾಗಲೇ ಅನುಮತಿ ಕೊಡಲಾಗಿದೆ. ಉಳಿದಂತೆ ಈ ಹಿಂದಿನ ಕ್ರಮವೇ ಮುಂದುವರಿಯುತ್ತದೆ. ಐಟಿ-ಬಿಟಿಗೆ ಅಗತ್ಯವಿರುವಷ್ಟು ಮಾತ್ರ ಅನುಮತಿ ಕೊಡಲಾಗಿದೆ, ಪರಿಸ್ಥಿತಿ ನೋಡಿ ಮುಂದಿನ ಕ್ರಮ ತೆಗೆದುಕೊಳ್ಳಲಾಗುತ್ತದೆ. ಕಟ್ಟಡ ಕಾಮಗಾರಿಗಳಿಗೆ ಸಂಬಂಧಪಟ್ಟಂತೆ ಕಟ್ಟಡ ಕಾರ್ಮಿಕರು ಮೈಸೂರು ಜಿಲ್ಲೆಯವರಾಗಿದ್ದು, ಇಲ್ಲೇ ಇದ್ದರೆ ಮಾತ್ರ ಕೆಲಸ ಮಾಡಬಹುದು. ಹೊರ ಜಿಲ್ಲೆ ಇಲ್ಲವೇ ರಾಜ್ಯಗಳಿಂದ ಈ ಸಂದರ್ಭದಲ್ಲಿ ಇಲ್ಲಿಗೆ ಬಂದು ಕೆಲಸ ಮಾಡಲು ಅನುಮತಿ ಇಲ್ಲ. ಕಬ್ಬಿಣ ಹಾರ್ಡ್ವೇರ್ ಅಂಗಡಿಗಳು ತೆರೆಯುವಂತಿಲ್ಲ. ಪ್ಲಂಬರ್ ಎಲೆಕ್ಟ್ರಿಕ್ ಕೆಲಸಗಳಿಗೆ ಪೊಲೀಸ್ ಅನುಮತಿ ಅವಶ್ಯಕ. ಉಳಿದ ವಿಷಯಗಳಿಗೆ ಮೇ 3ನೇ ತಾರೀಖಿನವರೆಗೆ ಯಾವುದೇ ಕಾರಣಕ್ಕೂ ಅನುಮತಿ ಇಲ್ಲ. ಈ ಬಗ್ಗೆ ಪರಿಶೀಲನೆ ನಡೆಸಿ ಮುಂದೆ ಏನು ಮಾಡಬಹುದು ಎಂದು ತೀರ್ಮಾನ ಮಾಡಲಾಗುವುದು ಎಂದು ಹೇಳಿದರು.
ಮೈಸೂರಿನಲ್ಲಿ ಲಾಕ್ ಡೌನ್ ಸಡಿಲಿಕೆ ಇಲ್ಲ.
Please follow and like us: