ಮೈಸೂರು ಜಿಲ್ಲೆಯಲ್ಲಿ ಹೆಚ್ಚಾದ ಕೊರೊನಾತಂಕ

ರಾಜ್ಯದಲ್ಲಿ ಮಾರಕ ಕೊರೊನಾ ಸೋಂಕು ವ್ಯಾಪಕವಾಗಿ ಹೆಚ್ಚುತ್ತಿರುವ ಹಿನ್ನೆಲೆ ಮೈಸೂರು ಜಿಲ್ಲೆಯಲ್ಲೂ ಆತಂಕ ಹೆಚ್ಚಾಗಿದೆ. ಒಂದೇ ದಿನಕ್ಕೆ 52 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, ಜಿಲ್ಲೆಯಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 639ಕ್ಕೆ ಏರಿಕೆಯಾಗಿದೆ. ಈ ಕುರಿತು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮುಂಜಾಗ್ರತಾ ಕ್ರಮಗಳನ್ನು ಬಿಗಿಗೊಳಿಸಿದೆ. ಹೀಗಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಇಂದಿನಿಂದ ಐದು ದಿನಗಳ ಕಾಲ ಚಾಮುಂಡಿಬೆಟ್ಟಕ್ಕೆ ಭಕ್ತರ ಪ್ರವೇಶ ನಿರ್ಬಂಧಿಸಲಾಗಿದೆ. ಇದೇ ವೇಳೆ ಐತಿಹಾಸಿಕ ಅರಮನೆಗೂ ಕೊರೊನಾ ಭೀತಿ ತಟ್ಟಿದ್ದು, ಮೂರು ದಿನಗಳ ಕಾಲ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧಸಲಾಗಿದೆ.

 

 

Please follow and like us:

Leave a Reply

Your email address will not be published. Required fields are marked *

Next Post

ಹೈಸ್ಕೂಲ್ ಮಕ್ಕಳಿಗೆ ಸ್ಮಾರ್ಟ್ ಪೋನ್ ಒದಗಿಸಿಕೊಡಿ- ಸಿಎಂಗೆ ಶಾಸಕ ಬಂಡೆಪ್ಪ ಕಾಶೆಂಪುರ್ ಮನವಿ

Fri Jul 10 , 2020
ಕೊರೊನಾದಿಂದ ಲಾಕ್‌ಡೌನ್ ಉಂಟಾದ ಪರಿಣಾಮ ಶಾಲಾ – ಕಾಲೇಜುಗಳು ಬಂದ್ ಆಗಿದ್ದು, ಆನ್ ಲೈನ್ ಕ್ಲಾಸ್ ನಡೆಸಲು ಸರ್ಕಾರ ಮುಂದಾಗಿದೆ. ಅದರಂತೆಯೇ ಸರ್ಕಾರ ಕನಿಷ್ಟ ಪಕ್ಷ ಹೈಸ್ಕೂಲ್ ವಿದ್ಯಾರ್ಥಿಗಳಿಗಾದರು ಸ್ಮಾರ್ಟ್ ಫೋನ್ ಒದಗಿಸಿಕೊಡಬೇಕೆಂದು ಮಾಜಿ ಸಚಿವ ಬಂಡೆಪ್ಪ ಕಾಶೆಂಪುರ್ ಸಿ.ಎಂ ಬಿಎಸ್ವೈಗೆ ಮನವಿ ಮಾಡಿದ್ದಾರೆ. ಬೀದರ್‌ನಲ್ಲಿ ಮಾತನಾಡಿದ ಅವರು, ಆನ್‌ಲೈನ್ ಕ್ಲಾಸ್ ಜಾರಿಗೊಳಿಸಲು ಶಿಕ್ಷಣ ಇಲಾಖೆ ಯಾವ ರೀತಿ ಸಿದ್ದತೆ ಮಾಡಿಕೊಂಡಿದೆ. ಯಾವ ರೀತಿಯ ಸಿದ್ದತೆ ಮಾಡಿಕೊಳ್ಳಬೇಕಾಗಿದೆ ಎಂಬ ಸಲಹೆ […]

Advertisement

Wordpress Social Share Plugin powered by Ultimatelysocial