ಉತ್ತರ ಮ್ಯಾನ್ಮಾರ್ನ ಜೇಡ್ ಗಣಿಯೊಂದರಲ್ಲಿ ಭೂಕುಸಿತ ಉಂಟಾಗಿದೆ. ಭೂ ಕುಸಿತದಿಂದಾಗಿ ಸುಮಾರು 50 ಮಂದಿ ಮೃತಪಟ್ಟಿದ್ದಾರೆ ಎಂದು ದೇಶದ ಅಗ್ನಿಶಾಮಕ ಸೇವಾ ಇಲಾಖೆ ಮತ್ತು ಮಾಹಿತಿ ಸಚಿವಾಲಯದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕಚಿನ್ ರಾಜ್ಯದ ಜೇಡ್ ಪಕಾಂತ್ ಪ್ರದೇಶದಲ್ಲಿ ಗಣಿಗಾರರು ಕಲ್ಲುಗಳನ್ನು ಸಂಗ್ರಹಿಸುತ್ತಿದ್ದರು. ಭಾರೀ ಮಳೆಯಿಂದಾಗಿ ಈ ದುರಂತ ಸಂಭವಿಸಿದೆ. ಒಟ್ಟು 50 ಮೃತ ದೇಹಗಳನ್ನು ಹೊರ ತೆಗೆಯಲಾಗಿದ್ದು, ನಾವು ಇನ್ನೂ ರಕ್ಷಣಾ ಪ್ರಕ್ರಿಯೆಯಲ್ಲಿ ತೊಡಗಿಕೊಂಡಿದ್ದೇವೆ ಎಂದು ತಿಳಿಸಿದ್ದಾರೆ. ಈ ಪ್ರದೇಶದಲ್ಲಿ ಇಂಥ ದುರಂತಗಳು ಸಾಮಾನ್ಯವಾಗಿದೆ. ಈ ಪ್ರಕರಣದಲ್ಲಿ ನೂರಾರು ಕಾರ್ಮಿಕರು ಮಣ್ಣಿನಡಿ ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಸಾವಿನ ಸಂಖ್ಯೆ ಇನ್ನು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅಗ್ನಿಶಾಮಕದಳ ಸಿಬ್ಬಂದಿ ಹೇಳಿದ್ದಾರೆ.