ಯಡಿಯೂರಪ್ಪಗೆ ಮಾಜಿ ಸಿಎಂ ಸಿದ್ದು ಒತ್ತಾಯ

ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಮುಖ್ಯ ಪರೀಕ್ಷೆ ಬರೆದಿರುವ ಅಭ್ಯರ್ಥಿಗಳಿಗೆ ಉತ್ತರ ಪತ್ರಿಕೆಗಳ ದೃಢೀಕೃತ ಪ್ರತಿ ನೀಡಲು ನಿರಾಕರಿಸುತ್ತಿರುವ ಕರ್ನಾಟಕ ಲೋಕಸೇವಾ ಆಯೋಗದ ವಿರುದ್ಧ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕುರಿತು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರಿಗೆ ಪತ್ರ ಬರೆದಿರುವ ಅವರು, ಮೌಲ್ಯಮಾಪನ ಆಗಿರುವ ಉತ್ತರ ಪತ್ರಿಕೆ ಪ್ರತಿ ಪಡೆದುಕೊಳ್ಳುವುದು ಅಭ್ಯರ್ಥಿಗಳ ಹಕ್ಕು ಎಂದು ಹೇಳಿದ್ದಾರೆ. ಮಾಹಿತಿ ಹಕ್ಕು ಕಾಯ್ದೆಯನ್ನೂ ಕೆಪಿಎಸ್ಸಿ ಸಮರ್ಪಕವಾಗಿ ಅನುಷ್ಠಾನ ಮಾಡುತ್ತಿಲ್ಲ ಎಂದೂ ಆಯೋಗ ಆಕ್ಷೇಪ ವ್ಯಕ್ತಪಡಿಸಿದೆಆದರೂ, ಅಭ್ಯರ್ಥಿಗಳನ್ನು ಕೆಪಿಎಸ್ಸಿ ಅಲೆದಾಡಿಸಲಾಗುತ್ತಿದೆ ಎಂದು ವಿವರಿಸಿದ್ದಾರೆ. ನನ್ನನ್ನು ಭೇಟಿ ಮಾಡಿ ಅಳಲು ತೋಡಿಕೊಂಡಿರುವ ಅಭ್ಯರ್ಥಿಗಳು, ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಚಾಮರಾಜನಗರಕ್ಕೆ ಹೊಸ ಎಸ್ಪಿ -ದಿವ್ಯಾ ಸಾರಾ ಥಾಮಸ್ ಅಧಿಕಾರ ಸ್ವೀಕಾರ

Fri Jul 10 , 2020
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ದಿವ್ಯಾ ಸಾರಾ ಥಾಮಸ್ ಅವರು ಅಧಿಕಾರ ಸ್ವೀಕರಿಸಿದರು. ದಿವ್ಯಾ ಅವರು ಜಿಲ್ಲೆಯ ಮೊದಲ ಮಹಿಳಾ ಎಸ್ಪಿಯಾಗಿದ್ದಾರೆ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಎಚ್.ಡಿ. ಆನಂದಕುಮಾರ್ ಅವರನ್ನು ಬೆಂಗಳೂರಿನ ಆಂತರಿಕ ಭದ್ರತಾ ವಿಭಾಗದ ಎಸ್‌ಪಿಯಾಗಿ ವರ್ಗಾವಣೆ ಮಾಡಲಾಗಿತ್ತು. ಆದರೆ ಇದುವರೆಗೂ ಮೂವ್‌ಮೆಂಟ್ ಆರ್ಡರ್ ನೀಡಿರಲಿಲ್ಲ. ಪೊಲೀಸ್ ಮಹಾ ನಿರ್ದೇಶಕರು ಹೊರಡಿಸಿರುವ ಆದೇಶದಲ್ಲಿ ದಿವ್ಯಾ ಸಾರಾ ಥಾಮಸ್ ಹಾಗೂ ಆನಂದ್‌ಕುಮಾರ್ ಅವರಿಗೆ ಸೂಚಿಸಿರುವ ಸ್ಥಳದಲ್ಲಿ ಅಧಿಕಾರ ವಹಿಸಿಕೊಳ್ಳುವಂತೆ ಮೂವ್‌ಮೆಂಟ್ ಆರ್ಡರ್ ಹೊರಡಿಸಿದ್ದರು.ಹಾಗಾಗಿ […]

Advertisement

Wordpress Social Share Plugin powered by Ultimatelysocial