ಇಂದು ರಕ್ತದಾನಿಗಳ ದಿನವಾಗಿದ್ದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಕ್ತದಾನದ ಮಹತ್ವವನ್ನು ಸಾರಿದ್ದಾರೆ.ಯಡಿಯೂರಪ್ಪನವರು ಮತ್ತು ಅನೇಕ ಗಣ್ಯರು ರಕ್ತದಾನದ ದಿನದಂದು ಶುಭ ಹಾರೈಸಿದ್ದರೆ. ಅತ್ಯಗತ್ಯಸಂದರ್ಭಗಳಲ್ಲಿ ಜೀವ ಉಳಿಸುವ ರಕ್ತದಾನವೇ ಶ್ರೇಷ್ಠ ದಾನ. ಅತ್ಯಗತ್ಯ ಸಂದರ್ಭಗಳಲ್ಲಿ ರಕ್ತದಾನ ಮಾಡುವ ಮೂಲಕ ಮತ್ತೊಬ್ಬರ ಜೀವಕ್ಕೆ ಆಸರೆಯಾಗೋಣ ಎಂದು ತಿಳಿಸಿದ್ದರೆ. ತುರ್ತು ಸಂದರ್ಭಗಳಲ್ಲಿ ಎಲ್ಲರಿಗೂ ರಕ್ತ ಸಿಗುವ ನಿಟ್ಟಿನಲ್ಲಿ ಕೆಲಸ ಮಾಡುವ ಬಗ್ಗೆ ಪಣ ತಡೋಣ ಎಂದು ಯಡಿಯೂರಪ್ಪ ರವರು ಮನವಿ ಮಾಡಿಕೊಂಡಿದ್ದಾರೆ. ಮಾನವೀಯತೆಯನ್ನು ಸಂಭ್ರಮಿಸೋಣ. ರಕ್ತದಾನದ ಮೂಲಕ ಆರೋಗ್ಯಕರ ಸಮಾಜ ನಿರ್ಮಾಣ ಮಾಡೋಣ. ಈ ಪವಿತ್ರ ಕಾಯಕದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡ ಪ್ರತಿಯೊಬ್ಬರನ್ನು ನಾನು ಅಭಿನಂದಿಸುತ್ತೇನೆ.ವಿಶ್ವ ರಕ್ತದಾನಿಗಳ ದಿನ ಕುರಿತಂತೆ ಟ್ವೀಟ್ ಮಾಡುವ ಮೂಲಕ ಸಿಎಂ ಬಿ.ಎಸ್. ಯಡಿಯೂರಪ್ಪನವರು ಹೇಳಿದ್ದಾರೆ