ಯಾರ ಬಳಿ ದುಡ್ಡಿದೆಯೋ ಅವರು ಮಾತ್ರ ಕುಡಿಯಿರಿ: ಅಬಕಾರಿ ಸಚಿವ

ದೆಹಲಿ, ಆಂಧ್ರ ಮಾದರಿಯಲ್ಲಿ ನಮ್ಮಲ್ಲೂ ಮದ್ಯ ಮಾರಾಟದ ಟ್ಯಾಕ್ಸ್ ಹೆಚ್ಚಳ ಆಗಿದೆ. ರಾಜ್ಯಾದ್ಯಂತ ಶೇ.40 ರಷ್ಟು ಮದ್ಯದಂಗಡಿಗಳು ತೆರೆದಿವೆ ಎಂದು ಅಬಕಾರಿ ಸಚಿವ ಹೆಚ್.ನಾಗೇಶ್ ಹೇಳಿದ್ದಾರೆ. ಕೋಲಾರದಲ್ಲಿ ಮಾತನಾಡಿದ ಅವರು, ಯಾರ ಬಳಿ ದುಡ್ಡಿದೆಯೋ ಅವರು ಮಾತ್ರ ಕುಡಿಯಿರಿ. ಎಂಎಸ್‌ಐಎಲ್ ಹಾಗೂ ವೈನ್ ಶಾಪ್ ಮೂಲಕ ಮಾತ್ರ ಮದ್ಯ ಮಾರಾಟಕ್ಕೆ ಅನುಮತಿ ನೀಡಲಾಗಿದೆ. ಇದುವರೆಗೂ 500 ಕೋಟಿವರೆಗೂ ಕಲೆಕ್ಷನ್ ಆಗಿದೆ. ಒಂದು ಕ್ವಾರ್ಟರ್ ಮೇಲೆ 5 ರೂಪಾಯಿ ಹೆಚ್ಚಳವಾಗಲಿದೆ. ಒಟ್ಟು 22,500 ಸಾವಿರ ಕೋಟಿ ಟಾರ್ಗೆಟ್ ಇತ್ತು. ತೆರಿಗೆ ಹೆಚ್ಚಳ ಆಗಿರೋದ್ರಿಂದ 2,500 ಕೋಟಿ ಹೆಚ್ಚಿಗೆ ಬರಲಿದೆ. ಈ ವರ್ಷ ಒಟ್ಟು 25 ಸಾವಿರ ಕೋಟಿ ನಮ್ಮ ಬೊಕ್ಕಸಕ್ಕೆ ಬರಲಿದೆ. ಎಂಎಸ್‌ಐಎಲ್ ಹಾಗೂ ವೈನ್ ಶಾಪ್ ಬಿಟ್ಟು, ಇನ್ನುಳಿದ ಶಾಪ್ ಗಳನ್ನು ತೆರೆಯಲು 18ನೇ ತಾರೀಖಿನ ಬಳಿಕ ತೀರ್ಮಾನ ಮಾಡುತ್ತೇವೆ ಎಂದು ಹೇಳಿದರು.

ವರದಿ:  ವೆಬ್  ಡೆಸ್ಕ್  ಸ್ಪೀಡ್  ನ್ಯೂಸ್  ಕನ್ನಡ

Please follow and like us:

Leave a Reply

Your email address will not be published. Required fields are marked *

Next Post

ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 705ಕ್ಕೆ ಏರಿಕೆ

Thu May 7 , 2020
ರಾಜ್ಯದಲ್ಲಿ ಇಂದು 12 ಜನರಿಗೆ ಕೊರೋನಾ ಸೋಂಕು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 705ಕ್ಕೆ ಏರಿಕೆಯಾಗಿದೆ. ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಲ್ತ್ ಬುಲೆಟಿನ್ ನಿಂದ ತಿಳಿದು ಬಂದಿದೆ.  ಹೊಸದಾಗಿ ಸೋಂಕಿತರ ಪೈಕಿ ದಾವರಣೆಗೆರೆ ಮೂವರಿಗೆ, ಕಲಬುರ್ಗಿಯ ಮೂವರಿಗೆ, ಬೆಳಗಾವಿಯ ಒಬ್ಬರಿಗೆ, ಬೆಂಗಳೂರು ನಗರದ ಒಬ್ಬರಿಗೆ, ಬಾಗಲಕೋಟೆಯ ಮೂವರಿಗೆ ಮತ್ತು ಧಾರವಾಡದಲ್ಲಿ ಒಬ್ಬರಿಗೆ ಕೊರೋನಾ ಸೋಂಕು ಪತ್ತೆಯಾಗಿದೆ. .ಕೊರೋನಾಗೆ ಇದುವರೆಗೆ 30 ಜನರು ರಾಜ್ಯದಲ್ಲಿ ಸಾವನ್ನಪ್ಪಿದ್ದರೇ, […]

Advertisement

Wordpress Social Share Plugin powered by Ultimatelysocial