ನವದೆಹಲಿ : ಕೊರೊನಾ ಪೀಡಿತರಿಗೆ ಕೇಂದ್ರ ಸರ್ಕಾರ ಸೀಮಿತ ಪ್ರಮಾಣದಲ್ಲಿ ರೋಗಿಗಳಿಗೆ ಪ್ಲಾಸ್ಮಾ ಚಿಕಿತ್ಸೆ ನೀಡಲು ಅನುಮತಿ ನೀಡಿದೆ. ದೆಹಲಿಯಲ್ಲಿ ಈವರೆಗೆ ನಾಲ್ವರು ಕೊರೊನಾ ಸೋಂಕಿತರಿಗೆ ಪ್ಲಾಸ್ಮಾ ಚಿಕಿತ್ಸೆ ನೀಡಿಲಾಗಿದ್ದು, ಇದಕ್ಕೆ ಧನಾತ್ಮಕ ಸ್ಪಂದನೆ ವ್ಯಕ್ತವಾಗಿದೆ ಎಂದು ಸಿಎಂ ಅರವಿಂದ ಕೇಜ್ರಿವಾಲ್ ತಿಳಿಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೆಹಲಿಯ ಲೋಕ್ ನಾಯಕ್ ಜೈ ಪ್ರಕಾಶ್ ನಾರಾಯಣ್ ಆಸ್ಪತ್ರೆಯಲ್ಲಿ ಕೆಲ ದಿನಗಳ ಹಿಂದೆ ನಾಲ್ವರು ಕೊರೊನಾ ಸೋಂಕಿತರಿಗೆ ಪ್ಲಾಸ್ಮಾ ಥೆರಪಿ ನೀಡಲಾಗಿತ್ತು. ಈ ರೋಗಿಗಳಲ್ಲಿ ಧನಾತ್ಮಕ ಸ್ಪಂದನೆ ವ್ಯಕ್ತವಾಗಿದ್ದು, ಮತ್ತೆ ಮೂವರು ಸೋಂಕಿತರಿಗೆ ರಕ್ತ ಹಾಗೂ ಪ್ಲಾಸ್ಮಾ ಚಿಕಿತ್ಸೆ ನೀಡಲು ಸಜ್ಜಾಗಿದ್ದೇವೆ. ಶೀಘ್ರದಲ್ಲೇ ಈ ಥೆರಪಿ ನಡೆಸಲಾಗುತ್ತದೆ. ಕೋವಿಡ್-೧೯ ನಿಂದ ಗುಣಮುಖರಾಗಿರುವ ರೋಗಿಗಳು ಮನೆಯಲ್ಲೇ ವಿಶ್ರಾಂತಿ ಪಡೆಯುತ್ತಿದ್ದು, ಅವರು ತಮ್ಮ ರಕ್ತದ ಪ್ಲಾಸ್ಮಾ ನೀಡಲು ಮುಂದಾಗಬೇಕೆಂದು ಹೇಳಿದರು.