ಕೊರೊನಾ ವೈರಸ್ ಕುರಿತಾದ ನಿಖರ ಮಾಹಿತಿಗಳನ್ನು ಒದಗಿಸುವ ಸಲುವಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನಟ, ನಿರ್ದೇಶಕ ರಮೇಶ್ ಅರವಿಂದ್ ಅವರನ್ನು ತನ್ನ ರಾಯಭಾರಿಯನ್ನಾಗಿ ನೇಮಕ ಮಾಡಿದೆ.ಕೊರೊನಾ ವೈರಸ್ ಸಂಕಷ್ಟವನ್ನು ನಿಯಂತ್ರಿಸಲು ನೆರವಾಗುವಂತೆ ಅದರ ಕುರಿತು ಜನರಿಗೆ ಅಧಿಕೃತ ಮಾಹಿತಿ ಒದಗಿಸಲು ರಮೇಶ್ ಅರವಿಂದ್ ನೆರವಾಗಲಿದ್ದಾರೆ. ಕೊರೊನಾ ವೈರಸ್ ಸಂಕಷ್ಟವನ್ನು ನಿಭಾಯಿಸಲು ಸಮಿತಿಯೊಂದನ್ನು ರಚಿಸಲಾಗಿದ್ದು, ಪರಿಣಾಮಕಾರಿ ಫಲಿತಾಂಶಕ್ಕಾಗಿ ಈ ಸಮಿತಿಗೆ ವಿವಿಧ ವಲಯಗಳ ಜನರನ್ನು ಸೇರಿಸಿಕೊಂಡು ರಾಜ್ಯ ಸರ್ಕಾರ ಅವರಿಗೆ ಈ ಜವಾಬ್ದಾರಿ ನೀಡಿದೆ ಎಂದು ಬಿಬಿಎಂಪಿಗೆ ನೂತನವಾಗಿ ನೇಮಕಗೊಂಡಿರುವ ಆಯುಕ್ತ ಎನ್. ಮಂಜುನಾಥ್ ಪ್ರಸಾದ್ ತಿಳಿಸಿದ್ದಾರೆ. ತಮ್ಮ ವೈಯಕ್ತಿಕ ಸಾಮರ್ಥ್ಯಕ್ಕೆ ಅನುಗುಣವಾಗಿ ಈ ಮಾಹಿತಿಗಳನ್ನು ಜನರಿಗೆ ತಲುಪಿಸುತ್ತಿರುವುದಾಗಿ ರಮೇಶ್ ಅರವಿಂದ್ ತಿಳಿಸಿದ್ದರು. ಕೋವಿಡ್ 19 ನಿಭಾಯಿಸುವ ಸಲುವಾಗಿ ರಚಿಸಲಾಗಿರುವ ಬಿಬಿಎಂಪಿ ಕೋವಿಡ್ 19 ಟಾಸ್ಕ್ ಫೋರ್ಸ್ನಲ್ಲಿಯೂ ರಮೇಶ್ ಅರವಿಂದ್ ಭಾಗಿಯಾಗಿದ್ದಾರೆ.
ರಮೇಶ್ ಅರವಿಂದ್ ಈಗ ಕೊರೊನಾ ವೈರಸ್ ಜಾಗೃತಿ ರಾಯಭಾರಿ
Please follow and like us: