ಗೋ ಹತ್ಯೆ ಮತ್ತು ರಕ್ಷಣೆ ಮಸೂದೆ ೨೦೧೨ರನ್ನು ರಾಜ್ಯ ಸರ್ಕಾರ ಮತ್ತೆ ಜಾರಿಗೆ ತರಲು ಮುಂದಾಗಿದೆ. ಈಗಾಗಲೇ ಗುಜರಾತ್ ಮತ್ತು ಉತ್ತರ ಪ್ರದೇಶ ರಾಜ್ಯಗಳಲ್ಲಿ ಈ ಮಸೂದೆ ಜಾರಿಯಲ್ಲಿದ್ದು ಅಧ್ಯಯನ ಮಾಡಿಕೊಂಡು ಬರಲು ರಾಜ್ಯದಿಂದ ಅಧಿಕಾರಿಗಳ ತಂಡವೊAದನ್ನು ಕಳುಹಿಸಿಕೊಡಲಾಗುತ್ತದೆ ಎಂದು ಪಶು ಸಂಗೋಪನಾ ಸಚಿವ ಪ್ರಭು ಚೌಹಾನ್ ತಿಳಿಸಿದ್ದಾರೆ.ಈ ಮಸೂದೆ ಒಂದು ಬಾರಿ ಕಾನೂನಾಗಿ ಜಾರಿಗೆ ಬಂದ ನಂತರ ಗೋವುಗಳನ್ನು ಕೊಲ್ಲಲು ಮಾರಾಟ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗುತ್ತದೆ. ಬೇರೆ ರಾಜ್ಯಗಳಿಗೆ ಹಸುಗಳನ್ನು ಸಾಗಾಟ ಮಾಡುವುದನ್ನು ಕೂಡ ತಡೆಯಲಾಗುತ್ತದೆ. ಕಾಮಧೇನುವಾದ ಗೋವುಗಳನ್ನು ಕಾಪಾಡುವುದು ನಮ್ಮ ಆದ್ಯ ಕರ್ತವ್ಯ. ಈ ನಿಟ್ಟಿನಲ್ಲಿ ರಾಜ್ಯದ ಅಲ್ಲಲ್ಲಿ ಗೋಶಾಲೆಗಳನ್ನು ಬಲವರ್ಧಿಸಲು ನಾವು ಆರಂಭಿಸಿದ್ದೇವೆ. ಸ್ಥಳೀಯ ತಳಿಗಳ ಹಸುಗಳನ್ನು ರಕ್ಷಿಸಲು ಗೋ ಸೇವಾ ಆಯೋಗವನ್ನು ಸ್ಥಾಪಿಸುವುದಾಗಿ ಕಳೆದ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಘೋಷಿಸಿತ್ತು ಎಂದು ಹೇಳಿದರು.
ರಾಜ್ಯದಲ್ಲಿ ಗೋಹತ್ಯೆ ನಿಷೇಧಕ್ಕೆ ಚಿಂತನೆ..?
Please follow and like us: