ಅಕ್ಟೋಬರ್ 15ರಿಂದ ಸೂಕ್ತ ಮುನ್ನೆಚ್ಚರಿಕಾ ಕ್ರಮಗಳೊಂದಿಗೆ ಶಾಲಾ ಕಾಲೇಜುಗಳನ್ನು ಆರಂಭಿಸಲು ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದ್ದು ಹೀಗಾಗಿ ರಾಜ್ಯದಲ್ಲೂ ಶಾಲೆಗಳನ್ನು ಆರಂಭಿಸಲಾಗುತ್ತಾದಾ ಎಂಬ ಪ್ರಶ್ನೆ ಮೂಡಿತ್ತು.ಆದರೆ ತರಾತುರಿಯಲ್ಲಿ ಅಕ್ಟೋಬರ್ 15ರಿಂದ ಶಾಲಾ ಕಾಲೇಜುಗಳನ್ನು ಆರಂಭಿಸುವ ಕುರಿತು ರಾಜ್ಯ ಸರ್ಕಾರ ತೀರ್ಮಾನಿಸುವುದಿಲ್ಲ ಎಂದು ಹೇಳಲಾಗಿದೆ. ಹೀಗಾಗಿಯೇ ತಜ್ಞರು ಹಾಗೂ ಪೋಷಕರ ಜೊತೆ ಚರ್ಚೆಗಳನ್ನು ನಡೆಸಲಾಗುತ್ತಿದ್ದು, ಆ ಬಳಿಕವೇ ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಹೇಳಲಾಗಿದೆ.
ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಕೊರೊನಾ ಸೋಂಕಿಗೊಳಗಾಗಿ ಕ್ವಾರಂಟೈನ್ ನಲ್ಲಿದ್ದು ಇಂತಹ ಸಂದರ್ಭದಲ್ಲೂ ತಜ್ಞರ ಜೊತೆ ನಿರಂತರ ಸಂಪರ್ಕದಲ್ಲಿದ್ದು ಸಮಾಲೋಚನೆ ನಡೆಸುತ್ತಿದ್ದಾರೆ. ಶಾಲಾ ಕಾಲೇಜುಗಳನ್ನು ಆರಂಭಿಸುವ ಸಾಧಕ – ಬಾಧಕಗಳ ಪರಿಶೀಲನೆ ಬಳಿಕವೇ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.