ರಾಜ್ಯದಲ್ಲಿ ಹಿಜಾಬ್-ಕೇಸರಿ ಶಾಲು ವಿವಾದ : ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ಆರಂಭ

ಬೆಂಗಳೂರು : ರಾಜ್ಯದಲ್ಲಿ ಹಿಜಾಬ್-ಕೇಸರಿ ಶಾಲು ವಿವಾದದ (Hijab-kesari shalu controversy) ನಡುವೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraja Bommai) ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ (Cabinet Meeting) ಆರಂಭವಾಗಿದೆ.ರಾಜ್ಯದಲ್ಲಿ ಹಿಜಾಬ್-ಕೇಸರಿ ಶಾಲು ಗದ್ದಲ ಜೋರಾಗಿದೆ. ಈ ನಡುವೆ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆ ಆರಂಭವಾಗಿದೆ. ಸಚಿವ ಸಂಪುಟ ಸಭೆಯಲ್ಲಿ ಹಿಜಾಬ್ ಮತ್ತು ಕೇಸರಿ ಶಾಲು ಸಂಘರ್ಷದ ಬಗ್ಗೆ ಚರ್ಚೆ ನಡೆಯಲಿದ್ದು, ವಿವಿಧ ಜಿಲ್ಲೆಗಳ ಪರಿಸ್ಥಿತಿ ಕುರಿತಾಗಿ ಸಚಿವರೊಂದಿಗೆ ಚರ್ಚೆ ನಡೆಸಿ ಮುಂದಿನ ನಿರ್ಧಾರ ಕೈಗೊಳ್ಳಲಿದ್ದಾರೆ ಎನ್ನಲಾಗಿದೆ.ಸಿಎಂ ಬಸವರಾಜ ಬೊಮ್ಮಾಯಿ ಅವರು ಈಗಾಗಲೇ ವಿವಿಧ ಜಿಲ್ಲೆಗಳ ಮಾಹಿತಿಯನ್ನು ಸಂಗ್ರಹಿಸಿದ್ದು, ಇಂದು ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಚರ್ಚೆ ನಡೆಸಿದ್ದು, ಮಹತ್ವದ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.ಹೈಕೋರ್ಟ್‌ನಲ್ಲಿ ಹಿಜಾಬ್ ವಿವಾದ ಸಂಬಂಧ ಇಂದು ಮತ್ತೆ ವಿಚಾರಣೆ ನಡೆಯಲಿದ್ದು, ಎಲ್ಲರ ಚಿತ್ತ ಕೋರ್ಟ್ ತೀರ್ಪಿನತ್ತ ನೆಟ್ಟಿದೆ. ಸಂಪುಟ ಸಭೆಯಲ್ಲಿಯೂ ಈ ಸಂಬಂಧ ಚರ್ಚೆ ನಡೆಯಲಿದೆ ಎಂದು ತಿಳಿದುಬಂದಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಹಿಜಾಬ್ ವಿವಾದದ ಬಗ್ಗೆ ಮತ್ತೊಂದು ಸ್ಪೋಟಕ ಹೇಳಿಕೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್!

Wed Feb 9 , 2022
ಹಿಜಾಬ್ ವಿವಾದದ ಬಗ್ಗೆ ಮತ್ತೊಂದು ಸ್ಪೋಟಕ ಹೇಳಿಕೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬಿಜೆಪಿಯ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಹಿಂದೂ ವಿದ್ಯಾರ್ಥಿಗಳಿಗೆ ಕೇಸರಿ ಶಾಲುಗಳನ್ನ ಸರಬರಾಜು ಮಾಡಿದ್ದು ಬಿಜೆಪಿ ಸರ್ಕಾರದಲ್ಲಿ ಮಂತ್ರಿಯಾಗಿರುವ ಒಬ್ಬರ ಮಗ ಎಂದಿದ್ದಾರೆ.ಯಾವುದೇ ಹೆಸರನ್ನು ಬಹಿರಂಗ ಪಡಿಸದೆ ಬಿಜೆಪಿ ನಾಯಕರ ವಿರುದ್ಧ ಡಿಕೆಶಿ ಸ್ಪೋಟಕ ಹೇಳಿಕೆ ನೀಡಿದ್ದಾರೆ.ಶಿವಮೊಗ್ಗದಲ್ಲಿ ಕೇಸರಿ ಶಾಲುಗಳನ್ನ, ಪೇಟಗಳನ್ನ ತರಿಸಿ ಕೊಟ್ಟವರು ಯಾರು. ರಾತ್ರೋರಾತ್ರಿ ಶಾಲುಗಳು,‌ ಪೇಟಗಳು ಎಲ್ಲಿಂದ ಬಂದವು. ವಿದ್ಯಾರ್ಥಿಗಳಿಗೆ ಕೇಸರಿ […]

Advertisement

Wordpress Social Share Plugin powered by Ultimatelysocial