ರಾಜ್ಯಾದಂತ ಇಂದು ಮಾಸ್ಕ್ ದಿನಾಚರಣೆ

ರಾಜ್ಯದಾದ್ಯಂತ ಇಂದು ಮಾಸ್ಕ್ ದಿನಾಚರೆಣೆಗೆ ಬಿ.ಬಿ.ಎಂ.ಪಿ. ಹಾಗೂ ಆರೋಗ್ಯ ಇಲಾಖೆ ವತಿಯಿಂದ ಚಾಲನೆ ನೀಡಿದ ಮುಖ್ಯಮಂತ್ರಿಗಳು ವಿಧಾನಸೌಧದಿಂದ ಕಬ್ಬನ್ ಪಾರ್ಕ್ ವರೆಗೂ ಪಾದಯಾತ್ರೆ ಮಾಡಿ ಎಲ್ಲಾ ಜಿಲ್ಲೆಗಳಲ್ಲೂ ಮಾಸ್ಕ್ ದಿನವನ್ನು ಆಚರಿಸಲಾಗುತ್ತಿದ್ದು, ಪಾದಯಾತ್ರೆ ವೇಳೆ ಮಾಸ್ಕ್ ಧರಿಸುವುದು ಸ್ಯಾನಿಟೈಸರ್ ಬಳಕೆ ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಕೋವಿಡ್-19 ನಿಯಂತ್ರಣ ಬಗ್ಗೆ ಅರಿವು ಮೂಡಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದ್ದಾರೆ. ಈ ವೇಳೆ ಉಪಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ ಹಾಗೂ ಅಶ್ವತ್ಥ್ ನಾರಾಯಣ್, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್, ಕಂದಾಯ ಸಚಿವ ಆರ್. ಅಶೋಕ್, ಸಂಸದರುಗಳಾದ ಪಿ.ಸಿ. ಮೋಹನ್ ಹಾಗೂ ತೇಜಸ್ವಿ ಸೂರ್ಯ, ಖ್ಯಾತ ಕ್ರಿಕೆಟ್ ಪಟು ಅನಿಲ್ ಕುಂಬ್ಳೆ, ಚಿತ್ರನಟ ಪುನೀತ್ ರಾಜ್ ಕುಮಾರ್, ನಟಿ ರಾಗಿಣಿ ದ್ವಿವೇದಿ ಸೇರಿದಂತೆ ಹಲವರು ಈ ಸಂದರ್ಭದಲ್ಲಿ ವಿಧಾನಸೌಧದದಿಂದ ಕಬ್ಬನ್ ಪಾರ್ಕ್ ವರೆಗೆ ನಡೆದ ಪಾದಯಾತ್ರೆಯಲ್ಲಿ ಭಾಗಿಯಾಗಿದ್ದರು.

Please follow and like us:

Leave a Reply

Your email address will not be published. Required fields are marked *

Next Post

ಬಿಜೆಪಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

Thu Jun 18 , 2020
ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ದಾವಣಗೆರೆ ಜಿಲ್ಲಾ ಕಾಂಗ್ರೆಸ್ ವತಿಯಿಂದ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ನಗರದ ಶಾಮನೂರು ರಸ್ತೆಯಲ್ಲಿರುವ ಮಹಾನಂದಿ ಪೆಟ್ರೋಲ್ ಬಂಕ್ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್.ಕೆ. ಶೆಟ್ಟಿ, ಯುಪಿಎ ಸರ್ಕಾರದಲ್ಲಿ ಕಚ್ಚಾತೈಲ ಬೆಲೆ ಹೆಚ್ಚಾಗಿದ್ದರೂ ಸಹ ಪೆಟ್ರೋಲ್ ಬೆಲೆ 80 ರೂ. ದಾಟಿರಲಿಲ್ಲ, ಆದರೆ ಈಗ ಕಚ್ಚಾತೈಲ ಬೆಲೆ […]

Advertisement

Wordpress Social Share Plugin powered by Ultimatelysocial