ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ವಿರುದ್ದ ಸಿದ್ದರಾಮಯ್ಯ ಕಿಡಿ

ಕೊರೊನಾ ಸಾಮಾಗ್ರಿ ಖರೀದಿಯಲ್ಲಿ ನಡೆದಿರುವ ಭ್ರಷ್ಟಚಾರ ಕುರಿತಂತೆ ಮತ್ತಷ್ಟು ದಾಖಲೆಗಳ ಸಹಿತಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುವುದಾಗಿ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.ಅಂತರಾಷ್ಟ್ರೀಯ ವಸ್ತು ಪ್ರದರ್ಶನದಲ್ಲಿ ಸ್ಥಾಪಿಸಲಾಗಿರುವ ಕೋವಿಡ್ ಹಾರೈಕೆ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಕೊರೊನಾ ನಿರ್ವಹಣೆಯಲ್ಲಿ ಉದಾಸಿನತೆ ತೋರಿಸಿದೆ.ಜೂನ್, ಜುಲೈನಲ್ಲಿ ಸೋಂಕು ಹೆಚ್ಚಾಗಲಿದೆ ಎಂದು ಎಲ್ಲರೂ ಹೇಳಿದ್ದರು. ನಿಯಂತ್ರಣದ ಮಾಡಲು ಸೂಕ್ತ ಕ್ರಮ ಕೈಗೊಂಡಿಲ್ಲ, ಚಿಕಿತ್ಸೆಯನ್ನು ಸರಿಯಾಗಿ ಮಾಡಿಲ್ಲ. ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಕೊರೊನಾ ನಿಯಂತ್ರಿಸಲು ವಿಫಲವಾಗಿವೆ. ವಿಪಕ್ಷ ಸೇರಿದಂತೆ ಯಾರನ್ನು ಈ ಸರ್ಕಾರಗಳು ವಿಶ್ವಾಸಕ್ಕೆ ತೆಗೆದುಕೊಳ್ಳಲ್ಲ. ಸರ್ವಾಧಿಕಾರಿ ಮನೋಭಾವದಿಂದ ಆಡಳಿತ ನಡೆಸುತ್ತಿದೆ. ಈಗಲಾದರೂ ಎಚ್ಚೆತ್ತು ನಿಯಂತ್ರಣ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.

Please follow and like us:

Leave a Reply

Your email address will not be published. Required fields are marked *

Next Post

ಎಚ್.ಸಿ.ಜಿ ಆಸ್ಪತ್ರೆಯ ಸಹಯೋಗದೊಂದಿಗೆ ಬ್ಯಾಂಕ್ ಶುರು

Tue Jul 21 , 2020
ರಾಜ್ಯದಲ್ಲಿ ಇಂದಿನಿAದ ಪ್ಲಾಸ್ಮಾ ಬ್ಯಾಂಕ್ ಆರಂಭವಾಗಿದ್ದು, ಹೆಚ್. ಸಿ.ಜಿ ಆಸ್ಪತ್ರೆಯಲ್ಲಿ ಇಂದು ಸಂಜೆ ಪ್ಲಾಸ್ಮಾ ಬ್ಯಾಂಕ್‌ಗೆ ಚಾಲನೆ ದೊರೆತಿದೆ.ರಾಜ್ಯ ಸರ್ಕಾರದ ಜೊತೆ ಎಚ್. ಸಿ.ಜಿ ಆಸ್ಪತ್ರೆಯ ಸಹಯೋಗದೊಂದಿಗೆ ಈ ಪ್ಲಾಸ್ಮಾ ಬ್ಯಾಂಕ್ ಶುರುವಾಗಿದೆ. ಬ್ಲಡ್ ಬ್ಯಾಂಕ್ ಮಾದರಿಯಲ್ಲಿ ಪ್ಲಾಸ್ಮಾ ಬ್ಯಾಂಕ್ ಆರಂಭವಾಗಿದ್ದು. ಇನ್ನು ಪ್ಲಾಸ್ಮಾ ದಾನ ಮಾಡುವವರಿಗೆ ರಾಜ್ಯ ಸರ್ಕಾರದಿಂದ ಐದು ಸಾವಿರ ರೂ. ಪ್ರೋತ್ಸಾಹ ಧನ ನೀಡಲಾಗುತ್ತಿದೆ. ಕೊರೊನಾ ಸೋಂಕಿನಿAದ ಗುಣಮುಖರಾದವರು ಪ್ಲಾಸ್ಮಾ ದಾನ ಮಾಡಬಹುದಾಗಿದ್ದು, ಈವರೆಗೆ ಕೇವಲ […]

Advertisement

Wordpress Social Share Plugin powered by Ultimatelysocial