ಕೊರೊನಾ ಸಮಯದಲ್ಲಿ ರಾಜ್ಯದಲ್ಲಿ ಉಭಯ ರಾಷ್ಟಿçÃಯ ಪಕ್ಷಗಳು ಸರಸಪ್ಪರ ದಾಖಲೆಯ ಆರೋಪಕ್ಕೆ ಇಳಿದೆವೆ. ಪಕ್ಷ ಬೇಧ ಮರೆತು ಒಗ್ಗಟಿನ ಮಂತ್ರ ಜಪಿಸುವುದು ಬಿಟ್ಟು ರಾಜಕಾರಣಕ್ಕೆ ಇಳಿದೆವೆ. ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ರಾಜ್ಯ ಸರ್ಕಾರದ ವಿರುದ್ಧ ಕಟುವಾಗಿ ಟೀಕಿಸಿದ್ದರು.ವೈದ್ಯಕೀಯ ಉಪಕರಣಗಳ ಬಗ್ಗೆ ನ್ಯಾಯಾಂಗ ತನಿಖೆ ನಡೆಸಲು ಸರ್ಕಾರಕ್ಕೆ ಭಯವೇಕೆ? ಸಚಿವರುಗಳು ಸತ್ಯವಂತರು ಏನ್ನುವುದಾದರೆ ತನಿಖೆ ಬೇಡ ಎನ್ನುವುದೇಕೆ? ಇದು ಭಂಡತನದ ಪರಮಾವಧಿ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಜನರಿಗೆ ಸತ್ಯಾ ಸತ್ಯತೆ ಗೊತ್ತಾಗಬೇಕು ಎಂದರೆ ನ್ಯಾಯಾಂಗ ತನಿಖೆಯಾಗಲಿ. ಅದಕ್ಕೆ ಭಯವೇಕೆ? ಸತ್ಯ ಹೊರ ಬಂದರೆ ಜನರೇ ತೀರ್ಮಾನ ಮಾಡುತ್ತಾರೆ. ನಮ್ಮ ಮತ್ತು ಅವರ ದಾಖಲೆಗಳು ನ್ಯಾಯಾಂಗ ತನಿಖೆಯ ಮುಂದೆ ಬರಲಿ ಎಂದು ಆಗ್ರಹಿಸಿದರು. ಅವ್ಯವಹಾರ ನಡೆಸಿಲ್ಲ ಎಂದರೆ ಹೈಕೋರ್ಟ್ನ ಹಾಲಿ ನ್ಯಾಯಮೂರ್ತಿಗಳಿಂದ ತನಿಖೆಯಾಗಲಿ ಎಂದು ಮತ್ತೆ ಒತ್ತಾಯಿಸುತ್ತೇನೆ ಎಂದು ಕಾರವಾಗಿ ಹೇಳಿದರು.
ರಾಜ್ಯ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಟೀಕೆ
Please follow and like us: