10 ಮತ್ತು 12 ನೇ ತರಗತಿ ಪರೀಕ್ಷೇ ಬರೆಯುವ ಮಕ್ಕಳಿಗೆ ಉಚಿತವಾಗಿ ಪ್ರಯಾಣಮಾಡುವುದಕ್ಕೆ ಅವಕಾಶ ನೀಡಿದೆ. ಕೊರೊನಾ ಲಾಕ್ ಡೌನ್ ಹಿನ್ನಲೆಯಲ್ಲಿ ರದ್ದಗಿದ ಪರೀಕ್ಷೆಗಳನ್ನು ಮತ್ತೆ ನಡೆಸಲು ರಾಜ್ಯ ಸರ್ಕಾರ ಮುಂದಗಿದ್ದು. ಇದಕ್ಕಾಗಿ ಎಸ್ ಎಸ್ ಎಲ್ ಸಿ ಮಕ್ಕಳು ಮತ್ತು ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆ ಬರೆಯುವ ಮಕ್ಕಳು ಪರೀಕ್ಷೆ ನಡೆಯುವ ಅವಧಿಯಲ್ಲಿ ತಮ್ಮ ವಾಸ ಸ್ಥಳದಿಂದ ಪರೀಕ್ಷಾ ಕೇಂದ್ರದವರೆಗೆ ವಿದ್ಯಾರ್ಥಿಗಳು ಹೋಗುವಾಗ ಮತ್ತು ಬರುವಾಗ ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ ಪ್ರವೇಶ ಪತ್ರವನ್ನು ತೋರಿಸಿ ಪರೀಕ್ಷಾ ಕೇಂದ್ರಗಳವರೆಗೆ ನಿಗಮದ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲಾಗುವುದು. ಜೂನ್ 25 ರಿಂದ ಜುಲೈ 4ರವರೆಗೆ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ನಗರ, ಹೊರವಲಯದಲ್ಲಿ ಸಾಮಾನ್ಯ- ವೇಗದೂತ ಬಸ್ಗಳಲ್ಲಿ ಪ್ರಯಾಣಿಸಬಹುದಾಗಿದೆ. ಎಂದು ಕೆಎಸ್ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ.ಕಳಸದ ತಿಳಿಸಿದ್ದಾರೆ.