ಉಪ ಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ್ ರವರು ರಾಮನಗರ ಜಿಲ್ಲೆಯಲ್ಲಿ ಕೊರೊನಾ ವೈರಸ್ ಪಾಸಿಟಿವ್ ಕೇಸ್ ಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನಿನ್ನೆ ಸಂಜೆ ಬಿಡಿದಿಯ ತಾಳಗಪ್ಪೆ ಗ್ರಾಮದಲ್ಲಿ ಸ್ತ್ರೀ ಶಕ್ತಿ ಸ್ವಸಹಾಯ ಸಂಘಗಳನ್ನು ಗ್ರಾಮ ಪಂಚಾಯತಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿದ ಸಂವಾದದಲ್ಲಿ ಪಾಲ್ಗೊಂಡ ನಂತರ ರಾಮನಗರ ಜಿಲ್ಲೆಯಲ್ಲೇ ಕೋವಿಡ್-19 ಟೆಸ್ಟಿಂಗ್ ಲ್ಯಾಬ್ ಪ್ರಾರಂಭಿಸುತ್ತಿದ್ದು ಕೊರೊನಾ ವೈರಸ್ ಎದುರಿಸಲು ನಾವು ಸಿದ್ದರಾಗಿದ್ದೇವೆ.ಎಂದು ತಿಳಿಸಿದ್ದಾರೆ,ಲಾಕ್ ಡೌನ್ ಅನ್ ಲಾಕ್ ಆಗಿದಬಳಿಕ ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದೆ ಆದರಿಂದ ಯಾರು ಕೂಡ ಆತಂಕಪಡುವ ಅಗತ್ಯವಿಲ್ಲ ಎಂದು ಹೇಳಿದ ಅವರು, ಇನ್ನು ಮುಂದೆ ಜಿಲ್ಲೆಯಲ್ಲಿ ಅತ್ಯಾಧುನಿಕ ಕೋವಿಡ್-19 ಟೆಸ್ಟಿಂಗ್ ಲ್ಯಾಬ್ ಕೂಡ ಮುಂದಿನ ವಾರ ಉದ್ಘಾಟನೆ ಮಾಡಲಾಗುತ್ತದೆ. ಎಂದು ಡಿಸಿಎಂ ಅಶ್ವಥ್ ನಾರಾಯಣ ರವರು ಹೇಳಿದ್ದಾರೆ.