80 ಬಿಜೆಪಿ ಸದಸ್ಯರೊಂದಿಗೆ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ರಚಿಸಿದ್ದು, ಸಮಿತಿಯಲ್ಲಿ ಕರ್ನಾಟಕದಿಂದ ಕೇಂದ್ರ ಸಚಿವೆ ನಿರ್ಮಲ ಸೀತಾರಾಮನ್, ಸಂಸದ ಪ್ರಲ್ಹಾದ್ ಜೋಷಿ ಗೆ ಸ್ಥಾನ ನೀಡಲಾಗಿದೆ.ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೂ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯಲ್ಲಿ ಸ್ಥಾನ ನೀಡಿದ್ದು, ಇದರೊಂದಿಗೆ ಸಂಸದ ಉಮೇಶ್ ಜಾಧವ್, ಸಚಿವರಾದ ಕೆ.ಎಸ್.ಈಶ್ವರಪ್ಪ, ಆರ್.ಅಶೋಕ್, ಗೋವಿಂದ ಕಾರಜೋಳ, ಡಾ.ಅಶ್ವತ್ಥ ನಾರಾಯಣ್ ಲಕ್ಷ್ಮಣ್ ಸವದಿಗೆ ವಿಶೇಷ ಆಹ್ವಾನಿತರ ಸ್ಥಾನ ನೀಡಲಾಗಿದೆ. 80 ಸಾಮಾನ್ಯ ಸದಸ್ಯರಲ್ಲದೆ, ಕಾರ್ಯಕಾರಣಿಯಲ್ಲಿ 50 ವಿಶೇಷ ಆಹ್ವಾನಿತರು ಮತ್ತು 179 ಖಾಯಂ ಆಹ್ವಾನಿತರು ಇರುತ್ತಾರೆ. 80 ಸದಸ್ಯರಲ್ಲಿ 37 ಮಂದಿ ಕೇಂದ್ರ ಸಚಿವರು ಮತ್ತು ರಾಜ್ಯದ ಹಲವಾರು ಸಚಿವರು ಸಮಿತಿಯ ಭಾಗವಾಗಿದ್ದಾರೆ.
ರಾಷ್ಟ್ರೀಯ ಕಾರ್ಯಕಾರಿ ಸಮಿತಿಯಲ್ಲಿ ರಾಜಹುಲಿಗೆ ಸ್ಥಾನ
Please follow and like us: