ರಾಮನಗರ ಜಿಲ್ಲೆಯ ರೇಷ್ಮೆ ರೀಲರ್ ಗಳ ಸಮಸ್ಯೆಯನ್ನು ಆದಷ್ಟು ಶೀಘ್ರ ಬಗೆಹರಿಸುವುದಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಭರವಸೆ ನೀಡಿದ್ದಾರೆ. ಜಿಲ್ಲೆಯ ವ್ಯಾಪ್ತಿಯ ರೇಷ್ಮೆ ರೀಲರ್ಗಳ ಜೊತೆಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ವೀಡಿಯೊ ಸಮಾಲೋಚನೆ ನಡೆಸಿದರು.
ರೀಲರ್ಗಳು ಹಲವರು ಸಮಸ್ಯೆಗಳನ್ನು ಕುಮಾರಸ್ವಾಮಿ ಅವರ ಬಳಿ ಹೇಳಿಕೊಂಡರು. ಸರ್ಕಾರ ತಮ್ಮ ಕಡೆ ನೋಡುತ್ತಿಲ್ಲ ಎಂದು ಅಳಲು ತೋಡಿಗೊಂಡರು. ಇದಕ್ಕೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ ಅವರು, ರೀಲರ್ಗಳ ಸಮಸ್ಯೆಗಳನ್ನು ಸರ್ಕಾರದ ಮಟ್ಟದಲ್ಲಿ ಪ್ರಸ್ತಾಪಿಸಿ, ಪರಿಹಾರ ಒದಗಿಸಿಕೊಡುವುದಾಗಿ ಭರವಸೆ ನೀಡಿದರು.