ಲಾಕ್ ಡೌನ್ ನಿಂದ ರೈತರಿಗೆ ಆಗಿರುವ ಸಮಸ್ಯೆಗಳನ್ನು ಬಗೆಹರಿಸಿ ಕೃಷಿ ಉತ್ಪನ್ನಗಳ ಸಾಗಾಟಕ್ಕೆ ಹೊರ ರಾಜ್ಯ ಮತ್ತು ಜಿಲ್ಲೆಗಳಲ್ಲಿ ಮಾರುಕಟ್ಟೆಗಳನ್ನು ಕಲ್ಪಿಸುವಂತೆ ಸಚಿವ ಎಸ್.ಟಿ. ಸೋಮಶೇಖರ್ ಸೂಚನೆ ನೀಡಿದ್ದಾರೆ. ಹಾಸನದಲ್ಲಿ ಮಾತನಾಡಿದ ಅವರು, ಸಹಕಾರಿ ಬ್ಯಾಂಕ್ಗಳಲ್ಲಿ ರೈತರಿಗೆ ಸಾಲಸೌಲಭ್ಯಕ್ಕೆ ಯಾವುದೇ ತೊಂದರೆಯಾಗದಂತೆ ಗಮನ ಹರಿಸಿ ಪಹಣಿಗಳು ಸುಲಭವಾಗಿ ಲಭ್ಯವಾಗುವಂತೆ ಸೌಲಭ್ಯ ಕಲ್ಪಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು. ಮೆಕ್ಕೆ ಜೋಳವನ್ನು ಬೆಂಬಲ ಬೆಲೆಯಲ್ಲಿ ಖರೀದಿಸುವ ಕುರಿತಂತೆ ಸರ್ಕಾರದ ಮಟ್ಟದಲ್ಲಿ ಚರ್ಚಿಸಲಾಗಿದೆ ಇದಕ್ಕೆ ಕೇಂದ್ರ ಸರ್ಕಾರದಿಂದ ನೆರವು ಅಗತ್ಯವಿದ್ದು ಮನವಿ ಮಾಡಲಾಗಿದೆ ಎಂದು ಹೇಳಿದರು.
ರೈತರಿಗೆ ಪಹಣಿಗಳು ಸುಲಭವಾಗಿ ಸಿಗುಂತೆ ಗಮನಿಸಿ: ಎಸ್.ಟಿ. ಸೋಮಶೇಖರ್
Please follow and like us: