ಕಾಂಗ್ರೆಸ್ ಪದಾಧಿಕಾರಿ ನೇಮಕದ ಬಗ್ಗೆ ಇನ್ನು ಯಾವುದೇ ಚರ್ಚೆ ನಡೆದಿಲ್ಲ ಎಂದು ಕೆಪಿಸಿಸಿ ಕಾರ್ಯಧ್ಯಕ್ಷ ಸಲಿಂ ಅಹಮ್ಮದ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಹಿಂದೆ ದಿನೇಶ್ ಗುಂಡೂರಾವ್ ಅಧ್ಯಕ್ಷರಾಗಿದ್ದಾಗ ಇದ್ದ ಪದಾಧಿಕಾರಿಗಳೇ ಇದ್ದಾರೆ. ನೋಡಬೇಕು ಏನ ಚರ್ಚೆ ಆಗುತ್ತೆ ಅಂತಾ. ಇನ್ನೂ ಯುತ್ ಕಾಂಗ್ರೆಸ್ ಅಧ್ಯಕ್ಷ ವಿಚಾರವಾಗಿ ಮಾತನಾಡಿದ ಅವರು, ಈ ಬಗ್ಗೆ ಕೂಡ ಯಾವುದೇ ನಿರ್ಧಾರ ಮಾಡಿಲ್ಲ. ಹಲವು ಆಕಾಂಕ್ಷಿಗಳು ಇದ್ದಾರೆ ಆದ್ರೆ ಎಲ್ಲರ ಅಭಿಪ್ರಾಯ ಪಡೆಯಬೇಕು. ನೋಡೊಣ ಕೆಲವು ದಿನಗಳ ಬಳಿಕ ಇದರ ಬಗ್ಗೆ ಸಭೆ ಮಾಡಿ ಚರ್ಚೆ ಮಾಡುತ್ತೆವೆ. ಕೊರೊನಾ ನಿಯಂತ್ರಣ ಮಾಡುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಸಚಿವರ ನಡುವೇ ಗೊಂದಲಗಳಿವೆ. ರೋಗಿಗಳಿಗೆ ಆಸ್ಪತ್ರೆಗಳಲ್ಲಿ ಬೆಡ್ ಸಿಗುತ್ತಿಲ್ಲ. ಸರಿಯಾದ ಚಿಕಿತ್ಸೆ ಕೂಡ ದೊರೆಯುತ್ತಿಲ್ಲ ಪಿಪಿಇ ಕಿಟ್ನಲ್ಲಿ ಹಗರಣ ನಡೆದಿದೆ ಇದರ ಬಗ್ಗೆ ತನಿಖೆಯಾಗಬೇಕು ಎಂದು ಹೇಳಿದರು.
ರೋಗಿಗಳಿಗೆ ಆಸ್ಪತ್ರೆಗಳಲ್ಲಿ ಬೆಡ್ ಸಿಗುತ್ತಿಲ್ಲ-ಸಲಿಂ ಅಹಮ್ಮದ್
Please follow and like us: