ಲಾಕ್‌ಡೌನ್ ಅವಧಿಯಲ್ಲಿ ಕರ್ತವ್ಯ ನಿರ್ವಹಿಸಿದ ಬಿಎಂಟಿಸಿ ವಾರಿಯರ್ಸ್

ಮಾರ್ಚ್ 26ರಿಂದ ಏಪ್ರಿಲ್ 20ರವರೆಗೆ ಲಾಕ್‌ಡೌನ್ ಅವಧಿಯಲ್ಲಿ ಕರ್ತವ್ಯ ನಿರ್ವಹಿಸಿದ ಬಿಎಂಟಿಸಿಯ ಕೊರೊನಾ ವಾರಿಯರ್ಸ್‌ಗಳಿಗೆ ಪ್ರತಿ ದಿನಕ್ಕೆ ತಲಾ 250 ರೂ.ವಿಶೇಷ ಭತ್ಯೆ ನೀಡಲು ಹಣ ಬಿಡುಗಡೆ ಮಾಡಲಾಗಿದೆ. ಜನರಿಗೆ ತುರ್ತು ಸೇವಾ ಸೌಲಭ್ಯವನ್ನು ಒದಗಿಸಲು ರಾಜ್ಯ ಸರ್ಕಾರ ಆರೋಗ್ಯ ಇಲಾಖೆಯ ನಿರ್ದೇಶನದ ಅನ್ವಯ ಪೊಲೀಸ್, ಆರೋಗ್ಯ ಇಲಾಖೆ, ಸಫಾಯಿ ಕಾರ್ಮಿಕರು ಮತ್ತು ಆಶಾ ಕಾರ್ಯಕರ್ತೆಯರಿಗೆ ಬಿಎಂಟಿಸಿ ಸಾರಿಗೆ ಸೌಲಭ್ಯವನ್ನು ಒದಗಿಸಿದೆ. ಈ ಕಠಿಣ ಕೊರೊನಾ ಅವಧಿಯಲ್ಲಿ ತಮ್ಮ ಜೀವದ ಹಂಗನ್ನು ತೊರೆದು 3397 ಸಿಬ್ಬಂದಿ ಸ್ವಯಂ ಪ್ರೇರಿತ ಕರ್ತವ್ಯ ನಿರ್ವಹಿಸಿದ್ದಾರೆ. ಈ ಹಿನ್ನೆಲೆ ಇವರ ಕರ್ತವ್ಯ ನಿಷ್ಠೆಯನ್ನು ಪ್ರಶಂಸಿಸಿ ಇವರ ಶ್ಲಾಘನೀಯ ಸೇವೆಗಾಗಿ ಪ್ರತಿ ನೌಕರರಿಗೆ ಒಂದು ದಿನಕ್ಕೆ 250 ರೂ.ನಂತೆ ವಿಶೇಷ ಭತ್ಯೆಯನ್ನು ನೀಡಿ ಪ್ರೋತ್ಸಾಹಿಸಲು ಜೂನ್ 22ರಂದು ನಡೆದ ನಿಗಮದ ನಿರ್ದೇಶಕರ ಸಭೆಗೆ ಸಲ್ಲಿಸಲಾಗಿದ್ದ ಪ್ರಸ್ತಾವನೆಯನ್ನು ಮಂಡಳಿ ಅನುಮೋದನೆ ನೀಡಿತ್ತು.

 

Please follow and like us:

Leave a Reply

Your email address will not be published. Required fields are marked *

Next Post

ಆಕ್ಷನ್ ಪ್ರಿನ್ಸ್ ದೃವ ಸರ್ಜಾಗೂ ಕೊರೊನಾ ದೃಢ

Wed Jul 15 , 2020
ಸ್ಯಾಂಡಲ್​ವುಡ್​ನ ಆಕ್ಷನ್ ಪ್ರಿನ್ಸ್ ದೃವ ಸರ್ಜಾ ಅವರಿಗೂ ಕರೊನಾ ಪಾಸಿಟಿವ್​ ದೃಢಪಟ್ಟಿದೆ. ಹೌದು ಕರೊನಾ ಪರೀಕ್ಷೆಗೆ ಒಳಪಟ್ಟಿದ್ದ ದೃವ ಸರ್ಜಾ ಮತ್ತು ಅವರ ಪತ್ನಿ ಇಬ್ಬರಿಗೂ ಸೋಂಕು ಇರುವುದು ವರದಿಯಲ್ಲಿ ತಿಳಿದುಬಂದಿದೆ. ಸ್ವಲ್ಪ ಪ್ರಮಾಣದಲ್ಲಿ ಸೋಂಕಿನ ಗುಣಲಕ್ಷಣ ಕಂಡುಬಂದಿದೆ. ಈ ಬಗ್ಗೆ ಟ್ವಿಟರ್​ನಲ್ಲಿ ಮಾಹಿತಿ ಹಂಚಿಕೊಂಡಿರುವ ದೃವ ಸರ್ಜಾ, ನನ್ನ ಹೆಂಡತಿ ಮತ್ತು ನಾನು ಕೋವಿಡ್​19 ಪರೀಕ್ಷೆ ಮಾಡಿಸಿಕೊಂಡಿದ್ದೇವೆ. ವರದಿ ಪಾಸಿಟಿವ್​ ಬಂದಿದೆ. ಚಿಕಿತ್ಸೆ ಪಡೆಯಲು ಆಸ್ಪತ್ರೆ ದಾಖಲಾಗಿದ್ದೇವೆ. ನಾವು […]

Advertisement

Wordpress Social Share Plugin powered by Ultimatelysocial