ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮಾಡುವ ಅವಶ್ಯಕತೆ ಇಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಸಚಿವರು, ಮತ್ತೆ ಲಾಕ್ ಡೌನ್ ಮಾಡುವ ಅವಶ್ಯಕತೆ ಇಲ್ಲ, ಬದಲಾಗಿ ಆರೋಗ್ಯ ವ್ಯವಸ್ಥೆಯನ್ನೇ ಮೇಲ್ದರ್ಜೆಗೇರಿಸಿದ್ದೇವೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಚೀನಾ ಕುರಿತು ಮಾತನಾಡಿ ಚೀನಾಗೆ ತಕ್ಕ ಪಾಠ ಕಲಿಸುತ್ತೇವೆ, ಚೀನಾಗೆ ತಕ್ಕ ಉತ್ತರ ನೀಡುವ ನಾಯಕತ್ವ ಇದೆ, ಒಂದು ಇಂಚು ಜಾಗವನ್ನೂ ಬಿಟ್ಟುಕೊಟ್ಟಿಲ್ಲ ಎಂದು ಹೇಳಿದರು.
ಲಾಕ್ಡೌನ್ ಅವಶ್ಯಕತೆ ಇಲ್ಲ
Please follow and like us: