ಲಾಕ್‌ಡೌನ್ ಉಡುಪಿ ಜಿಲ್ಲೆ ಬಹುತೇಕ ಸ್ತಬ್ಧ

ವ್ಯಾಪಕವಾಗಿ ಹರಡುತ್ತಿರುವ ಕೋವಿಡ್ ಸೋಂಕು ಮಟ್ಟ ಹಾಕುವ ನಿಟ್ಟಿನಲ್ಲಿ ರಾಜ್ಯ ಸರಕಾರ ರವಿವಾರ ಲಾಕ್‌ಡೌನ್ ಘೋಷಣೆ ಮಾಡಿರುವುದಕ್ಕೆ ಉಡುಪಿ ಜಿಲ್ಲೆಯಾ ದ್ಯಂತ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಜನರು ಸ್ವಯಂ ಪ್ರೇರಿತರಾಗಿ ಬಂದ್ ಆಚರಿಸಿ ಸರಕಾರದ ನಿರ್ಧಾರಕ್ಕೆ ಬೆಂಬಲ ಸೂಚಿಸಿದ್ದಾರೆ. ನಗರದ ಪ್ರಮುಖ ಭಾಗಗಳಾದ ಕಲ್ಸಂಕ, ಸಿಟಿ ಬಸ್ ನಿಲ್ದಾಣ, ಸರ್ವಿಸ್ ಬಸ್ ನಿಲ್ದಾಣ, ಕೆಎಸ್ಸಾರ್ಟಿಸಿ ಬಸ್ ನಿಲ್ದಾಣ, ಕೆ.ಎಂ. ಮಾರ್ಗ, ಕರಾವಳಿ ಬೈಪಾಸ್, ಬ್ರಹ್ಮಗಿರಿ ವೃತ್ತಗಳಲ್ಲಿ ಜನರ ಓಡಾಟ ಬಹುತೇಕ ವಿರಳವಾಗಿತ್ತು. ಆಸ್ಪತ್ರೆ, ಮೆಡಿಕಲ್ ಶಾಪ್ ಗಳು, ಆ್ಯಂಬುಲೆನ್ಸ್, ಪೆಟ್ರೋಲ್ ಬಂಕ್‌ಗಳು, ಸರಕು ಸಾಗಾಣಿಕೆ ವಾಹನ, ಪೊಲೀಸ್, ಅಗ್ನಿಶಾಮಕ ಸೇವೆಗಳು ಲಭ್ಯವಾಗಿದ್ದವು. ಉಳಿದಂತೆ ಎಲ್ಲ ಅಂಗಡಿಗಳನ್ನು ಮುಚ್ಚಲಾಗಿತ್ತು.

Please follow and like us:

Leave a Reply

Your email address will not be published. Required fields are marked *

Next Post

ಅಳಲು ತೋಡಿಕೊಂಡ ಪೌರ ಕಾರ್ಮಿಕರು

Mon Jul 6 , 2020
ರಾಜ್ಯದಲ್ಲಿ ದಿನೇ ದಿನೆ ಕೊರೊನಾ ಪ್ರಕರಣಗಳು ಏರಿಕೆಯಾಗುತ್ತಿದೆ. ಈ ಮಧ್ಯೆ ನಗರ ಸ್ವಚ್ಛತೆ ಕಾಪಾಡುವ ಪೌರ ಕಾರ್ಮಿಕರ ಪರಿಸ್ಥಿತಿ ಹೇಳತೀರದ್ದಾಗಿದೆ. ಈಗಾಗಲೇ ಅನೇಕ ಪೌರ ಕಾರ್ಮಿಕರಿಗೆ ಕೊರೊನಾ ವಕ್ಕರಿಸಿದೆ. ಇನ್ನು ಈ ಹಿಂದೆ ಅರ್ಧದಿನ ಕೆಲಸ ಮಾಡಿಸುತ್ತಿದ್ದ ಇಲಾಖೆ, ಇದೀಗ ಇಡೀ ದಿನ ಕೆಲಸ ಮಾಡಿಸುತ್ತಿದೆ ಎಂದು ಕಾರ್ಮಿಕರು ಆರೋಪಿಸಿದ್ದಾರೆ. ಕೊರೊನಾದಿಂದ ಭೀತಿಗೊಳಗಾದ ಕಾರ್ಮಿಕರು, ನಮಗೆ ಅರ್ಧ ದಿನ ಕೆಲಸ ಮಾಡಲು ಅವಕಾಶ ಕೊಡಿ, ಇಡೀ ದಿನ ಬೇಡ ಎಂದು […]

Advertisement

Wordpress Social Share Plugin powered by Ultimatelysocial