ಬೆಂಗಳೂರು: ಲಾಕ್ಡೌನ್ ಸಡಿಲಿಕೆಯಂಥ ನಿರ್ಣಯ ಶ್ರೀಮಂತ ವರ್ಗದ ಪರವೇ ಹೊರತು ಆರ್ಥಿಕ ದುಸ್ಥಿತಿಯಿಂದ ಬಳಲಿರುವ ಬಡವನ ಪರ ಇಲ್ಲ. ಇಂತಹ ನಿರ್ಣಯಗಳಿಂದ ಕರ್ನಾಟಕಕ್ಕೆ ತಾವು ದುರಂತಮಯ ಸನ್ನಿವೇಶ ತಂದೊಡ್ಡಿದ ಅಪಕೀರ್ತಿಗೆ ಪಾತ್ರರಾಗುತ್ತೀರಿ, ತಕ್ಷಣ ದುರಂತವನ್ನು ಆಹ್ವಾನಿಸುವ ನಿರ್ಣಯವನ್ನು ಕೈಬಿಡಬೇಕು ಎಂದು ಕಾಂಗ್ರೆಸ್ ಶಾಸಕ ಎಚ್.ಕೆ ಪಾಟೀಲ್ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಒತ್ತಾಯಿಸಿದ್ದಾರೆ.
ಲಾಕ್ಡೌನ್ ಸಡಿಲಿಕೆ ಅಂತ ತೀರ್ಮಾನ ಜನತೆಯ ಸರ್ವಾಂಗೀಣ ಹಿತವನ್ನೂ ಸಂಪೂರ್ಣವಾಗಿ ಪರಿಗಣಿಸಿ ಸರ್ವಸಮ್ಮತವಾಗುವ ರೀತಿಯಲ್ಲಿ ನಿರ್ಣಯ ಕೈಗೊಳ್ಳಬೇಕಾದುದ್ದು ಸರ್ಕಾರದ ಕರ್ತವ್ಯವಾಗಿತ್ತು. ಆದರೆ ಸಂಪೂರ್ಣ ಲಾಕ್ಡೌನ್ ಅನ್ನು ಸಡಿಲಗೊಳಿಸಿ ಬೆಂಗಳೂರಿನಂಥ ರೆಡ್ ಆಲರ್ಟ್ ಪ್ರದೇಶದಲ್ಲಿಯೇ ಹತ್ತಾರು ಲಕ್ಷ ವಾಹನಗಳ ಸಂಚಾರಕ್ಕೆ ಅನುಮತಿ ನಿಡಲಾಗಿದೆ ಇದು ಸರಿಯಲ್ಲ ಎಂದು ಹೇಳಿದ್ದಾರೆ.
ಲಾಕ್ಡೌನ್ ಸಡಿಲಿಕೆ ದುರಂತಕ್ಕೆ ಆಹ್ವಾನ: ಎಚ್.ಕೆ. ಪಾಟೀಲ
Please follow and like us: