ಲಾಕ್ ಡೌನ್ ಹಿನ್ನೆಲೆ ದೇಶದ ಆರ್ಥಿಕತೆಗೆ ತೀವ್ರ ಪೆಟ್ಟಾಗಿದೆ

ಕೊರೋನಾ ನಿಯಂತ್ರಣಕ್ಕಾಗಿ ಹೇರಲಾಗಿರುವ ಲಾಕ್ ಡೌನ್ ನಿಂದಾಗಿ ದೇಶದ ಆರ್ಥಿಕತೆಗೆ ತೀವ್ರ ಪೆಟ್ಟಾಗಿದೆ, ಮುಂದಿನ ದಿನಗಳಲ್ಲಿ ಪರಿಸ್ಥಿತಿ ಇನ್ನೂ ಗಂಭೀರವಾಗಲಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. ಈ ಕುರಿತು ಟ್ವೀಟ್  ಮಾಡಿರುವ ಅವರು, ‘ಮುಂದಿನ ದಿನಗಳಲ್ಲಿ ಹಸಿವು-ನಿರುದ್ಯೋಗದಂತಹ ಗಂಭೀರ ಸಮಸ್ಯೆಗಳು ಎದುರಾಗಲಿವೆ. ಹೀಗಾಗಿ ರಾಜ್ಯ ಸರ್ಕಾರಗಳು ಕೂಡಲೇ ಈ ಸಮಸ್ಯೆಗಳ ನಿರ್ವಹಣೆಗೆ ಮಾರ್ಗೋಪಾಯ ಹುಡುಕಬೇಕು . ರಿಸರ್ವ ಬ್ಯಾಂಕ್ ಒಳಗೊಂಡಂತೆ ಅನೇಕ ಸಂಸ್ಥೆಗಳು ಭಾರತದ ಜಿಡಿಪಿ ಬೆಳವಣಿಗೆ ತೀವ್ರ ಕುಸಿತಕ್ಕೆ ಇಳಿಯುವ ಮುನ್ಸೂಚನೆ ಕೊಟ್ಟಿರುವಾಗ ಕೇಂದ್ರ ಮತ್ತು ರಾಜ್ಯ ಸರಕಾರಗಳು ಜನಸಾಮಾನ್ಯನ ಕೈಯಲ್ಲಿ ಹಣ ಉಳಿಸುವ ಮಾರ್ಗೋಪಾಯಗಳನ್ನು ಹುಡುಕಬೇಕಾಗುತ್ತದೆ. ಮುಂಬರುವ ದಿನಗಳಲ್ಲಿ ‘ಕಾಸ್ಟ್ ಆಫ್ ಲಿವಿಂಗ್’ ಕಡಿಮೆ ಮಾಡುವುದು ಸರಕಾರಗಳ ಆದ್ಯತೆ ಆಗಲಿದೆ ಎಂದು ಹೇಳಿದರು.

 

Please follow and like us:

Leave a Reply

Your email address will not be published. Required fields are marked *

Next Post

ಪ್ರತಿದಿನ ೧೦೦ಜನರ ಬಂಧನ

Mon Apr 27 , 2020
ಲಂಡನ್: ಲಾಕ್‌ಡೌನ್ ಜಾರಿ ಆದಾಗಿನಿಂದ ಇಡೀ ಜಗತ್ತು ಸ್ಥಬ್ಧಗೊಂಡಂತೆಯೇ ಇದೆ. ಬಹುತೇಕ ಕಡೆ ರಸ್ತೆಗಳು ಖಾಲಿ ಹೊಡೀತಿವೆ. ಜನರು ತಮ್ಮ ಮನೆಗಳಲ್ಲೇ ಇದ್ದಾರೆ. ಲಾಕ್‌ಡೌನ್‌ನಿಂದಾಗಿ ಕೌಟುಂಬಿಕ ಕಲಹಗಳು ಹೆಚ್ಚಾಗಿವೆ ಅನ್ನೋ ವರದಿಗಳು ಕೂಡ ಇದೇ ವೇಳೆ ಹೊರ ಬಿದ್ದಿವೆ. ಲಂಡನ್‌ವೊಂದರಲ್ಲೇ ೬ ವಾರಗಳಲ್ಲಿ ಕೌಟುಂಬಿಕ ಕಲಹದ ಕೇಸ್‌ನಲ್ಲಿ ೪,೦೯೩ ಮಂದಿಯನ್ನ ಬಂಧಿಸಲಾಗಿದೆ. ಅಲ್ಲಿ ಲಾಕ್‌ಡೌನ್ ಜಾರಿಯಾಗಿ ೬ ವಾರಗಳಲ್ಲಿ (ಮಾ. ೯ ರಿಂದ ಏ. ೧೯ರವರೆಗೆ) ಇಷ್ಟು ಜನರನ್ನ ಬಂಧಿಸಲಾಗಿದೆ. […]

Advertisement

Wordpress Social Share Plugin powered by Ultimatelysocial