ಲೋಕಸಭಾ ಚುನಾವಣೆಗೂ ಮುನ್ನ ರಾಜ್ಯದಲ್ಲಿ ಮತ್ತೊಂದು ಮೆಗಾ ಆಪರೇಷನ್..!

ರಾಜ್ಯದಲ್ಲಿ ಸದ್ದಿಲ್ಲದೇ ನಡೀತಿದ್ಯಾ ಮೆಗಾ ಆಪರೇಷನ್ ರಾಜಕೀಯ..?

ಲೋಕಸಭಾ ಚುನಾವಣೆಗೂ ಮುನ್ನ ರಾಜ್ಯದಲ್ಲಿ ಮತ್ತೊಂದು ಮೆಗಾ ಆಪರೇಷನ್ ರಾಜಕೀಯ ನಡೆಯೋ ಸಾಧ್ಯತೆ ಇದೆ. ಕಾಂಗ್ರೆಸ್ ನಾಯಕರು ಬಿಜೆಪಿ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ. ಹಲವು ನಾಯಕರು ಬಿಜೆಪಿ ಬಿಟ್ಟು ಕಾಂಗ್ರೆಸ್ ಪಕ್ಷ ಸೇರೋದು ಪಕ್ಕಾ ಅನ್ನೋ ಮಾತನಾಡಿದ್ರು. ಈ ಸಾಧ್ಯತೆಯನ್ನು ತಳ್ಳಿ ಹಾಕಿದ್ದ ಬಿಜೆಪಿ ನಾಯಕರು ನೋ ಚಾನ್ಸ್‌ ಸಾಧ್ಯವೇ ಇಲ್ಲ. ನಮ್ಮ ಶಾಸಕರು ಯಾವುದೇ ಕಾರಣಕ್ಕೂ ಬಿಜೆಪಿ ಬಿಟ್ಟು ಹೋಗಲ್ಲ ಎಂದು ಹೇಳುತ್ತಿದ್ದಾರೆ. ಈ ರಾಜಕೀಯ ಹಗ್ಗ-ಜಗ್ಗಾಟದ ಮಧ್ಯೆ ಡಿಸಿಎಂ ಡಿ.ಕೆ ಶಿವಕುಮಾರ್ ಸದ್ದಿಲ್ಲದೇ ಆಪರೇಷನ್ ಹಸ್ತಕ್ಕೆ ಚಾಲನೆ ಕೊಟ್ಟಂತೆ ಕಾಣುತ್ತಿದೆ.

ಯಾರು, ಯಾರ ಸಂಪರ್ಕದಲ್ಲಿದ್ದಾರೆ ನೋಡೋಣ ಎನ್ನುತ್ತಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಬಿಜೆಪಿ ನಾಯಕರನ್ನು ಡೈರೆಕ್ಟಾಗಿ ಟಚ್ ಮಾಡಿದ್ದಾರೆ. ಇತ್ತೀಚೆಗೆ ಖುದ್ದು ಡಿಸಿಎಂ ಬಿಜೆಪಿ ಮಾಜಿ ಶಾಸಕರ ಜೊತೆ ರಹಸ್ಯವಾಗಿ ಮಾತುಕತೆ ನಡೆಸಿದ್ದಾರೆ. ಆಪರೇಷನ್ ಹಸ್ತ ಬಿಸಿ, ಬಿಸಿ ಚರ್ಚೆ ಆಗುತ್ತಿರುವಾಗಲೇ ಡಿ.ಕೆ ಶಿವಕುಮಾರ್ ಜೊತೆ ಬಿಜೆಪಿ ನಾಯಕರು ಕಾಣಿಸಿಕೊಂಡಿರೋದು ಕುತೂಹಲ ಕೆರಳಿಸಿದೆ. ಈ ಕುರಿತ ಮಹತ್ವದ ಫೋಟೋಗಳು ಬಿಡುಗಡೆಯಾಗಿದೆ.

ಡಿಸಿಎಂ ಡಿ.ಕೆ ಶಿವಕುಮಾರ್ ಜೊತೆ ಬಿಜೆಪಿ ನಾಯಕರು ರಹಸ್ಯ ಮಾತುಕತೆ ನಡೆಸಿದ್ದಾರೆ. ಮಾಜಿ ಸಚಿವ ಬಿ.ಸಿ ಪಾಟೀಲ್, ಮಾಜಿ ಶಾಸಕ ರಾಜುಗೌಡ ಡಿಕೆಶಿ ಜೊತೆ ಆತ್ಮೀಯವಾಗಿ ಮಾತನಾಡಿರೋ ಫೋಟೋ ಇದೀಗ ಬಯಲಾಗಿದೆ. ಅಂದ ಹಾಗೆ ಈ ಸೆನ್ಸೇಷನ್ ಫೋಟೋ ತೆಗೆದಿರೋದು

Please follow and like us:

tmadmin

Leave a Reply

Your email address will not be published. Required fields are marked *

Next Post

ಗೋಲ್ಡನ್ ಅವರ್‌ನಲ್ಲಿ ಎಚ್ಚೆತ್ತುಕೊಳ್ಳದಿದ್ರೆ ಪರ್ಮನೆಂಟ್ ಬೆಡ್ ಮೇಲೆ ಮಲಗುತ್ತಿದ್ದೆ-H.D ಕುಮಾರಸ್ವಾಮಿ

Sun Sep 3 , 2023
ಡಿಸ್ಚಾರ್ಜ್‌ ಬಳಿಕ H.D ಕುಮಾರಸ್ವಾಮಿ ಮಹತ್ವದ ಸುದ್ದಿಗೋಷ್ಠಿ..! ಮಾಜಿ ಸಿಎಂ H.D ಕುಮಾರಸ್ವಾಮಿಯವರು ಅನಾರೋಗ್ಯದ ಹಿನ್ನೆಲೆ ಜಯನಗರದ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ಡಿಸ್ಚಾರ್ಜ್‌ ಆಗುತ್ತಿದಂತೆ. H.D ಕುಮಾರಸ್ವಾಮಿಯವರು ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಬಳಿಕ ಧಿಡೀರ್‌  ಸುದ್ದಿಗೋಷ್ಠಿಯನ್ನು ನಡೆಸಿದ್ರು. ಇನ್ನೂ ಈ ವೇಳೆ ಮಾತನಾಡಿದ H.D ಕುಮಾರಸ್ವಾಮಿಯವರು,ಭಗವಂತನ ದಯೆಯಿಂದ ನಾನು ಆರೋಗ್ಯವಾಗಿದ್ದೇನೆ. ದೇವರು, ತಂದೆ, ತಾಯಿ ಆಶೀರ್ವಾದದಿಂದ ಗುಣಮುಖನಾಗಿದ್ದೇನೆ. ಕಳೆದ ಐದು ದಿನಗಳಿಂದ ಸ್ನೇಹಿತರಲ್ಲಿ ಭಯದ ವಾತಾವರಣ ಇತ್ತು ನಿಖರವಾದ ಆರೋಗ್ಯದ […]

Advertisement

Wordpress Social Share Plugin powered by Ultimatelysocial