ಬೆಂಗಳೂರು ಸಿಟಿ ಪೊಲೀಸರಿಗೆ ಸರ್ಕಾರದಿಂದ ಸಿಹಿಸುದ್ದಿ ಹೊರಡಿಸಲಾಗಿದೆ. ಬೆಂಗಳೂರು ಕಮೀಷನರೇಟ್ ನಲ್ಲಿ ಕೆಲಸ ಮಾಡುತ್ತಿರುವ ಪೊಲೀಸರಿಗೆ ಅಂತರ ಜಿಲ್ಲಾ ವರ್ಗಾವಣೆಗೆ ಅನುಮತಿ ಇರಲಿಲ್ಲ.ಈ ಹಿನ್ನೆಲೆಯಲ್ಲಿ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರು ನೆನಪೋಲೆ ಹೊರಡಿದ್ದಾರೆ. ಇದರಲ್ಲಿ ಬೆಂಗಳೂರು ಸಿಟಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಸಿಬ್ಬಂದಿಗಳಿಗೆ, ಕೋರಿಕೆ ಮೇರೆಗೆ ಜ್ಯೇಷ್ಠತೆ ಬಿಟ್ಟುಕೊಡುವ ಷರತ್ತಿಗೊಳಪಟ್ಟು, ಇತರೆ ಜಿಲ್ಲೆ ಹಾಗೂ ನಗರಗಳಿಗೆ ವರ್ಗಾವಣೆಗೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂಬುದಾಗಿ ತಿಳಿಸಿದ್ದಾರೆ. ಆದ್ರೇ ಜಿಲ್ಲೆಯಲ್ಲಿ ಪೊಲೀಸರಿಗೆ, ಕೆಲವು ನಿಯಮಗಳ ಆಧಾರದ ಮೇಲೆ ಅಂತರ ಜಿಲ್ಲೆಯ ವರ್ಗಾವಣೆಗೆ ಅವಕಾಶ ಕಲ್ಪಿಸಲಾಗಿದೆ. ಅವುಗಳೆಂದರೆ, ಜಿಲ್ಲಾ ವರ್ಗಾವಣೆ ಕೋರುವ ಸಿಬ್ಬಂದಿಗಳು ಬೆಂಗಳೂರು ನಗರ ಘಟಕದ ಕಾನ್ಸ್ಟೇಬಲ್ ಹುದ್ದೆಗೆ ನೇಮಕಾತಿ ಹೊಂದಿ, 7 ವರ್ಷ ಅಥವಾ ಅದಕ್ಕಿಂತ ಹೆಚ್ಚು ವರ್ಷಗಳು ಸೇವೆ ಸಲ್ಲಿಸಿರಬೇಕು. ಸಶಸ್ತ್ರ ಮೀಸಲು ಪಡೆ, ಎಸಿಪಿ, ಕೆಎಸ್ಐಎಫ್ ಸಿಬ್ಬಂದಿಗಳಿಗೆ ಅಂತರ ಜಿಲ್ಲಾ ವರ್ಗಾವಣೆಗೆ ಅವಕಾಶ ಮಾಡಿಕೊಡಲಾಗಿದೆ.
ವರ್ಗಾವಣೆಗೆ ನಿಯಮಗಳಡಿ ಅಸ್ತು ಎಂದ ಸರ್ಕಾರ
Please follow and like us: