ಲಾಕ್ ಡೌನ್ ವಿಸ್ತರಣೆ ಬಗ್ಗೆ ರ್ಚೆ ಸಾಕು. ಕೊರೊನಾ ನಿಯಂತ್ರಣಕ್ಕೆ ಲಾಕ್ ಡೌನ್ ಪರಿಹಾರವಲ್ಲ, ಬೇರೆ ಮರ್ಗಗಳ ಬಗ್ಗೆ ಆಲೋಚಿಸಿ ಎಂದು ವಲಯ ಉಸ್ತುವಾರಿಗಳಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಲಹೆ ನೀಡಿದ್ದಾರೆ. ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಬೆಂಗಳೂರು ಲಾಕ್ ಡೌನ್ ಕುರಿತ ಸ್ಥಿತಿಗತಿ ರ್ಚೆ ವೇಳೆ ಬಹುತೇಕ ಸಚಿವರು ಲಾಕ್ ಡೌನ್ ವಿಸ್ತರಣೆ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದರು. ಒಂದು ವಾರದ ಲಾಕ್ ಡೌನ್ ನಿಂದ ಕೊರೊನಾ ಹಬ್ಬುವಿಕೆ ನಿಯಂತ್ರಣ ಕಷ್ಟ, ಇನ್ನಷ್ಟು ದಿನಗಳ ಕಾಲ ವಿಸ್ತರಣೆ ಅಗತ್ಯವಿದೆ ಎಂದರು. ಇದಕ್ಕೆ ಮತ್ತೆ ಕೆಲ ಸಚಿವರು ದನಿಗೂಡಿಸಿದರು. ಸಭೆಯಲ್ಲಿ ಬಹುತೇಕರಿಂದ ಲಾಕ್ ಡೌನ್ ವಿಸ್ತರಣೆ ಬಗ್ಗೆ ಪದೇ ಪದೆ ಕೇಳಿಬಂದ ಅಭಿಪ್ರಾಯಕ್ಕೆ ಸಿಎಂ ಅಸಮಧಾನ ವ್ಯಕ್ತಪಡಿಸಿದರು. ಲಾಕ್ ಡೌನ್ ವಿಸ್ತರಣೆ ಬಗ್ಗೆ ಮಾತುಗಳು ಸಾಕು. ಈ ಬಗ್ಗೆ ಮುಂದೆ ನೋಡೋಣ, ಕೊರೊನಾ ನಿಯಂತ್ರಣಕ್ಕೆ ಲಾಕ್ ಡೌನ್ ಪರಿಹಾರವಲ್ಲ. ಬೇರೆ ಮರ್ಗಗಳ ಬಗ್ಗೆ ಆಲೋಚನೆ ಮಾಡಿ ಎಂದು ಸಲಹೆ ನೀಡಿದರು.
ವಲಯ ಉಸ್ತುವಾರಿಗಳಿಗೆ ಸಿಎಂ ಸಲಹೆ
Please follow and like us: