ರಾಜ್ಯದಲ್ಲಿ ಪ್ರಗತಿಯಲ್ಲಿರುವ ೯.೭೪ ಲಕ್ಷ ಮನೆಗಳನ್ನು ಪರ್ಣಗೊಳಿಸಲು ಒಟ್ಟು ೧೦,೧೯೪ ಕೋಟಿ ರೂಪಾಯಿಗಳ ಅನುದಾನದ ಮಂಜೂರಾತಿ ಬಗ್ಗೆ ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದರು. ವಸತಿ ಇಲಾಖೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಯಡಿಯೂರಪ್ಪ, ನಕಲಿ ದಾಖಲೆಗಳನ್ನು ನೀಡಿ ಮನೆ ಪಡೆದುಕೊಳ್ಳುವ ಪ್ರಕರಣಗಳನ್ನು ಪತ್ತೆ ಹಚ್ಚಿ ಸರಕಾರಕ್ಕೆ ೮,೦೦೦ ಕೋಟಿ ರೂ.ಗಳನ್ನು ಉಳಿತಾಯ ಮಾಡಿರುವುದು ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಜೊತೆಗೆ ವಸತಿ ಯೋಜನೆಗಳ ಪಾರರ್ಶಕ ಅನುಷ್ಠಾನಕ್ಕೆ ತಾಂತ್ರಿಕ ನೂನ್ಯತೆಗಳನ್ನು ಸರಿಪಡಿಸಿ, ಅನುದಾನ ದುರುಪಯೋಗ ತಡೆಯಲು ಅಭಿವೃದ್ಧಿಪಡಿಸಲಾಗಿರುವ ವಿಜಿಲ್ ಆ್ಯಪ್ ತಂತ್ರಾಂಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ವಸತಿ ಯೋಜನೆಗೆ ಸರ್ಕಾರದಿಂದ ಅನುದಾನ
Please follow and like us: