ವಸತಿ ಶಾಲೆಗಳಲ್ಲಿ ಸ್ಥಳೀಯರಿಗೆ ಮೀಸಲಾತಿ

ರಾಜ್ಯದಲ್ಲಿ ಇನ್ನು ಮುಂದೆ ವಸತಿ ಶಾಲೆಗಳ ಪ್ರವೇಶಾತಿಯಲ್ಲಿ ಶೇ.25ರಷ್ಟು ಸೀಟುಗಳನ್ನು ಸ್ಥಳೀಯ ಮಕ್ಕಳಿಗೆ ಮೀಸಲಿಡಲು ತೀರ್ಮಾನಿಸಲಾಗಿದೆ ಎಂದು ಡಿಸಿಎಂ ಗೋವಿಂದ ಎಂ. ಕಾರಜೋಳ ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸಿಎಂ ಯಡಿಯೂರಪ್ಪ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಸುಮಾರು 135 ವಸತಿ ಶಾಲೆಗಳನ್ನು ಪ್ರಾರಂಭಿಸಲಾಗಿದೆ. ಈ ವಸತಿ ಶಾಲೆಗಳು ಇರುವ ಗ್ರಾಮಗಳ ಮಕ್ಕಳಿಗೆ ಇದುವರೆಗೂ ಪ್ರವೇಶಕ್ಕೆ ಅವಕಾಶ ಕಲ್ಪಿಸಿರಲಿಲ್ಲ. ಕೇವಲ ವಸತಿ ಶಾಲೆಯನ್ನು ಹೊರಗಿನಿಂದ ನೋಡಿ ಸಮಾಧಾನಪಡಬೇಕಾಗಿತ್ತು. ಆದರೆ ಇದುವರೆಗೂ ಇದ್ದ ಕಾನೂನನ್ನು ಬದಲಿಸಿ ಇನ್ನು ಮುಂದೆ ವಸತಿ ಶಾಲೆಗಳು ಇರುವ ತಾಲೂಕಿನ ಸ್ಥಳೀಯ ಮಕ್ಕಳಿಗೆ ಶೇ. 25 ರಷ್ಟು ಸೀಟುಗಳನ್ನು ನೀಡಲು ನಿರ್ಧರಿಸಲಾಗಿದೆ. ಬಡ ಮಕ್ಕಳು ವ್ಯಾಸಂಗ ಮಾಡಲು ಉತ್ತಮ ಮೂಲಭೂತ ಸೌಕರ್ಯ ಇರುವಂತಹ ಕಟ್ಟಡ ಇರಬೇಕು. ವಾಸಕ್ಕೆ ಉತ್ತಮ ವಾತಾವರಣ ಇರಬೇಕು ಎನ್ನುವ ಕಾರಣಕ್ಕೆ ನೂತನವಾಗಿ ವಸತಿ ಶಾಲೆಗಳ ಕಟ್ಟಡಗಳನ್ನು ನಿರ್ಮಾಣ ಮಾಡಲಾಗುತ್ತಿದೆ ಎಂದು ಹೇಳಿದರು.

Please follow and like us:

Leave a Reply

Your email address will not be published. Required fields are marked *

Next Post

ಯಡಿಯೂರಪ್ಪರವರು ರಕ್ತದಾನದ ಮಹತ್ವವನ್ನು ಸಾರಿದ್ದಾರೆ.

Sun Jun 14 , 2020
ಇಂದು ರಕ್ತದಾನಿಗಳ ದಿನವಾಗಿದ್ದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಕ್ತದಾನದ ಮಹತ್ವವನ್ನು ಸಾರಿದ್ದಾರೆ.ಯಡಿಯೂರಪ್ಪನವರು ಮತ್ತು ಅನೇಕ ಗಣ್ಯರು ರಕ್ತದಾನದ ದಿನದಂದು ಶುಭ ಹಾರೈಸಿದ್ದರೆ. ಅತ್ಯಗತ್ಯಸಂದರ್ಭಗಳಲ್ಲಿ ಜೀವ ಉಳಿಸುವ ರಕ್ತದಾನವೇ ಶ್ರೇಷ್ಠ ದಾನ. ಅತ್ಯಗತ್ಯ ಸಂದರ್ಭಗಳಲ್ಲಿ ರಕ್ತದಾನ ಮಾಡುವ ಮೂಲಕ ಮತ್ತೊಬ್ಬರ ಜೀವಕ್ಕೆ ಆಸರೆಯಾಗೋಣ ಎಂದು ತಿಳಿಸಿದ್ದರೆ. ತುರ್ತು ಸಂದರ್ಭಗಳಲ್ಲಿ ಎಲ್ಲರಿಗೂ ರಕ್ತ ಸಿಗುವ ನಿಟ್ಟಿನಲ್ಲಿ ಕೆಲಸ ಮಾಡುವ ಬಗ್ಗೆ ಪಣ ತಡೋಣ ಎಂದು ಯಡಿಯೂರಪ್ಪ ರವರು ಮನವಿ ಮಾಡಿಕೊಂಡಿದ್ದಾರೆ. ಮಾನವೀಯತೆಯನ್ನು ಸಂಭ್ರಮಿಸೋಣ. ರಕ್ತದಾನದ […]

Advertisement

Wordpress Social Share Plugin powered by Ultimatelysocial