ಹಳೆ ವೈಷಮ್ಯದ ಹಿನ್ನಲೆಯಲ್ಲಿ ತಡರಾತ್ರಿ ದುಷ್ಕರ್ಮಿಗಳು ರೌಡಿಶೀಟರ್ ಓರ್ವನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ವಿಜಯಪುರದ ಸೊಲ್ಲಾಪುರ ರಸ್ತೆಯಲ್ಲಿರುವ ರಿಂಗ್ ರೋಡ್ ಬಳಿ ನಡೆದಿದೆ. ವಿಜಯಪುರ ನಿವಾಸಿ ಸತೀಶ್ ರೆಡ್ಡಿ ಕೊಲೆಯಾದ ರೌಡಿಶೀಟರ್. ತಡರಾತ್ರಿ ದುಷ್ಕರ್ಮಿಗಳು ಸತೀಶ್ ರೆಡ್ಡಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಕೊಲೆ ಮಾಡಿದ ನಂತರ ದುಷ್ಕರ್ಮಿಗಳು ಪರಾರಿಯಾಗಿದ್ದು, ಹಳೆಯ ವೈಷಮ್ಯ ಹಾಗೂ ಹಣಕಾಸಿನ ವ್ಯವಹಾರದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಹಾಗೂ ಆದರ್ಶನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಜಯಪುರದಲ್ಲಿ ದುಷ್ಕರ್ಮಿಗಳಿಂದ ರೌಡಿಶೀಡರ್ನ ಹತ್ಯೆ
Please follow and like us: