ವಿಜಯಪುರದಲ್ಲಿ ದುಷ್ಕರ್ಮಿಗಳಿಂದ ರೌಡಿಶೀಡರ್‌ನ ಹತ್ಯೆ

ಹಳೆ ವೈಷಮ್ಯದ ಹಿನ್ನಲೆಯಲ್ಲಿ ತಡರಾತ್ರಿ ದುಷ್ಕರ್ಮಿಗಳು ರೌಡಿಶೀಟರ್‌ ಓರ್ವನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ವಿಜಯಪುರದ ಸೊಲ್ಲಾಪುರ ರಸ್ತೆಯಲ್ಲಿರುವ ರಿಂಗ್ ರೋಡ್ ಬಳಿ ನಡೆದಿದೆ. ವಿಜಯಪುರ ನಿವಾಸಿ ಸತೀಶ್ ರೆಡ್ಡಿ ಕೊಲೆಯಾದ ರೌಡಿಶೀಟರ್. ತಡರಾತ್ರಿ ದುಷ್ಕರ್ಮಿಗಳು ಸತೀಶ್ ರೆಡ್ಡಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಕೊಲೆ ಮಾಡಿದ ನಂತರ ದುಷ್ಕರ್ಮಿಗಳು ಪರಾರಿಯಾಗಿದ್ದು, ಹಳೆಯ ವೈಷಮ್ಯ ಹಾಗೂ ಹಣಕಾಸಿನ ವ್ಯವಹಾರದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಹಾಗೂ ಆದರ್ಶನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Please follow and like us:

Leave a Reply

Your email address will not be published. Required fields are marked *

Next Post

ಭಾರತದಲ್ಲಿ ಮತ್ತಷ್ಟು ಚೈನಾದ ಅಪ್ಲಿಕೇಷನ್ ಬ್ಯಾನ್

Sat Jul 25 , 2020
ಮಾಹಿತಿ ಮತ್ತು ತಂತ್ರಜ್ಞಾನ ಸಚಿವಾಲಯ ಭಾರತದಲ್ಲಿ ಮತ್ತಷ್ಟು ಮೊಬೈಲ್ ಅಪ್ಲಿಕೇಷನ್ ಗಳನ್ನು ಬ್ಯಾನ್ ಮಾಡಿದ್ದು, ಹೆಚ್ಚಿನವು ಚೈನಾ ಮೂಲದ ಂಠಿಠಿಗಳು ಪ್ರಮುಖವಾಗಿ ಹಲೋ ಲೈಟ್, ಶೇರ್ ಇಟ್ ಲೈಟ್, ಬಿಗೋ ಲೈಟ್ , vಜಿಥಿಲೈಟ್ ಮುಂತಾದ ಅಪ್ಲಿಕೇಶನ್‌ಗಳನ್ನು ಕೂಡ ಗೂಗಲ್ ಪ್ಲೇ ಸ್ಟೋರ್ ನಿಂದ ತೆಗೆದುಹಾಕಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ ಬಾರಿ ಕೂಡ ಕೇಂದ್ರ ಸರ್ಕಾರ ಅತೀ ಹೆಚ್ಚು ಜನಪ್ರಿಯವಾಗಿದ್ದ ಟಿಕ್ ಟಾಕ್ ಸೇರಿದಂತೆ ೫೯ ಚೈನಾ ಮೂಲದ […]

Advertisement

Wordpress Social Share Plugin powered by Ultimatelysocial