ವಿಧಾನ ಪರಿಷತ್‌ಗೆ ಮೂವರು ಹೆಸರು ಶಿಫಾರಸು

ವಿಧಾನ ಪರಿಷತ್ ಚುನಾವಣೆಗೆ ರಾಜ್ಯ ಬಿಜೆಪಿ ಎಚ್. ವಿಶ್ವನಾಥ್, ಎಂಟಿಬಿ ನಾಗರಾಜ್ ಹಾಗೂ ಆರ್. ಶಂಕರ್ ಅವರ ಹೆಸರನ್ನು ಅಂತಿಮಗೊಳಿಸಿ ಶಿಫಾರಸ್ಸು ಮಾಡಲಾಗಿದೆ ಎಂದು ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು. ಮೈಸೂರಿನಲ್ಲಿ ಮಾತನಾಡಿದ ಅವರು, ಬಿಜೆಪಿ ಕೋರ್ ಕಮಿಟಿಯಲ್ಲಿ ಈ ಮೂವರ ಹೆಸರು ಅಂತಿಮ ಮಾಡಿ ತನ್ನ ಪಟ್ಟಿಯನ್ನ ಹೈಕಮಾಂಡ್ ಗೆ ಕಳುಹಿಸಿದೆ. ಇಂದು ಸಂಜೆ ವೇಳೆಗೆ ಅಧಿಕೃತ ಆದೇಶ ಬರಲಿದೆ ಎಂದರು. ಕೋರ್ ಕಮಿಟಿ ಶಿಫಾರಸ್ಸು ಮಾಡಿದ ಮೂವರು ಒಂದೇ ಕೋಮಿನವರು ಎಂಬ ಪ್ರಶ್ನೆಗಳು ಈಗ ಇಲ್ಲ. ಈ ಮೂವರು ರಾಜೀನಾಮೆ ಕೊಟ್ಟಿರುವುದಕ್ಕೆ ಸರ್ಕಾರ ಬಂದಿರುವುದು.ಸಿಎA ಕೊಟ್ಟ ಭರವಸೆಯೇನು ಎಂಬುದು ನಮಗು ಅವರಿಗು ಗೊತ್ತು ಎಂದರು.

Please follow and like us:

Leave a Reply

Your email address will not be published. Required fields are marked *

Next Post

ಪಿಎಂ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

Wed Jun 17 , 2020
ಲಡಾಖ್ ಗಾಲ್ವಾನ್ ಕಣಿವೆ ಪ್ರದೇಶದಲ್ಲಿ ನಡೆದ ಭಾರತ ಮತ್ತು ಚೀನಾ ಸೈನಿಕರ ಘರ್ಷಣೆಯಲ್ಲಿ 20 ಮಂದಿ ಭಾರತೀಯ ಯೋಧರು ಸಾವನ್ನಪ್ಪಿದ್ದಾರೆ. ಆದರೂ ಪ್ರಧಾನಿ ಮೋದಿ ಏಕೆ ಮೌನವಾಗಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ಟ್ವೀಟ್ ಮಾಡಿದ್ದಾರೆ. ಈ ಕುರಿತು ಚೀನಾ ವಿಚಾರದಲ್ಲಿ ಏನಾಗುತ್ತಿದೆ ಎಂಬುದು ನಮಗೆ ಗೊತ್ತಾಗಬೇಕಿದೆ ಪ್ರಧಾನಿ ಮೋದಿ ಯಾವ ಕ್ರಮ ಕೈಗೊಳ್ಳುತ್ತಿದ್ದಾರೆ ಎಂದು ರಾಹುಲ್ ಗಾಂಧಿ ಕೇಳುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ದೇಶವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವಂತೆ […]

Advertisement

Wordpress Social Share Plugin powered by Ultimatelysocial