ವಿಧಾನ ಪರಿಷತ್ ಚುನಾವಣೆಗೆ ರಾಜ್ಯ ಬಿಜೆಪಿ ಎಚ್. ವಿಶ್ವನಾಥ್, ಎಂಟಿಬಿ ನಾಗರಾಜ್ ಹಾಗೂ ಆರ್. ಶಂಕರ್ ಅವರ ಹೆಸರನ್ನು ಅಂತಿಮಗೊಳಿಸಿ ಶಿಫಾರಸ್ಸು ಮಾಡಲಾಗಿದೆ ಎಂದು ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು. ಮೈಸೂರಿನಲ್ಲಿ ಮಾತನಾಡಿದ ಅವರು, ಬಿಜೆಪಿ ಕೋರ್ ಕಮಿಟಿಯಲ್ಲಿ ಈ ಮೂವರ ಹೆಸರು ಅಂತಿಮ ಮಾಡಿ ತನ್ನ ಪಟ್ಟಿಯನ್ನ ಹೈಕಮಾಂಡ್ ಗೆ ಕಳುಹಿಸಿದೆ. ಇಂದು ಸಂಜೆ ವೇಳೆಗೆ ಅಧಿಕೃತ ಆದೇಶ ಬರಲಿದೆ ಎಂದರು. ಕೋರ್ ಕಮಿಟಿ ಶಿಫಾರಸ್ಸು ಮಾಡಿದ ಮೂವರು ಒಂದೇ ಕೋಮಿನವರು ಎಂಬ ಪ್ರಶ್ನೆಗಳು ಈಗ ಇಲ್ಲ. ಈ ಮೂವರು ರಾಜೀನಾಮೆ ಕೊಟ್ಟಿರುವುದಕ್ಕೆ ಸರ್ಕಾರ ಬಂದಿರುವುದು.ಸಿಎA ಕೊಟ್ಟ ಭರವಸೆಯೇನು ಎಂಬುದು ನಮಗು ಅವರಿಗು ಗೊತ್ತು ಎಂದರು.
ವಿಧಾನ ಪರಿಷತ್ಗೆ ಮೂವರು ಹೆಸರು ಶಿಫಾರಸು
Please follow and like us: