ತೋಟಗಾರಿಕೆ ಸಚಿವ ನಾರಾಯಣಗೌಡ ರವರು ಸುದ್ದಿಗಾರರೊಂದಿಗೆ ಮಾತನಾಡಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ಮಾಜಿ ಸಚಿವ ಹೆಚ್.ವಿಶ್ವನಾಥ್ ಕೂಡ ಕಾರಣ ಅವರಿಗೆ ಕೊಟ್ಟ ಮಾತಿನಂತೆ ಹೈಕಮಾಂಡ್ ನಡೆದುಕೊಳ್ಳುತ್ತದೆ. ಎಚ್.ವಿಶ್ವನಾಥ್ ಅವರಿಗೆ ಖಂಡಿತವಾಗಿಯೂ ವಿಧಾನ ಪರಿಷತ್ ಟಿಕೆಟ್ ಸಿಗುತ್ತೆ. ಪಕ್ಷದ ಹೈಕಮಾಂಡ್ ಹಂತದಲ್ಲಿ ಈ ಬಗ್ಗೆ ಮಾತುಕತೆಯೂ ಆಗಿದೆ. ಬಿಜೆಪಿಯಲ್ಲಿ ವಿಧಾನಪರಿಷತ್ ಚುನಾವಣೆಗೆ ಸ್ಪರ್ಧಿಸಲು ಆಕಾಂಕ್ಷಿಗಳು ಹೆಚ್ಚಾಗಿರುವುದು ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನವನ್ನು ಎಲ್ಲರೂ ಒಪ್ಪಿಕೊಳ್ಳಬೇಕು.ಎಂದು ತೋಟಗಾರಿಕೆ ಸಚಿವ ನಾರಾಯಣಗೌಡ ತಿಳಿಸಿದ್ದರೆ.