ಎ ಆರ್ ರೆಹಮಾನ್ ಅವರು ಸಂಗೀತ ಕ್ಷೇತ್ರದಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆಗೈದ ಸಾಧಕ. ಅಂತವರಿಗೇ ಅವಕಾಶಗಳ ಕೊರತೆಯಾಗುತ್ತಿದೆ ಎಂದರೆ ಆಶ್ಚರ್ಯವಲ್ಲವೆ. ಇತ್ತೀಚಿನ ಕೆಲವು ವರ್ಷಗಳಿಂದ ಈ ಸಂಗೀಯ ನಿರ್ದೇಶಕನಿಗೆ ಸಿಗುವ ಸಿನೇಮಾಗಳ ಸಂಖ್ಯೆಯಲ್ಲಿ ಭಾರೀ ಕುಸಿತವಾಗಿದೆ. ಇದಕ್ಕೆ ಅವರು ತನ್ನ ಬಗ್ಗೆ ಸುಳ್ಳು ವದಂತಿಗಳನ್ನು ಹರಡುವ ಗ್ಯಾಂಗ್ ಇದೆ. ಆದ್ದರಿಂದ ತಮಗೆ ಅವಕಾಶಗಳ ಕೊರತೆಯಾಗುತ್ತದೆ ಎಂದು ದೂರಿದ್ದಾರೆ. ರೇಡಿಯೊ ಕಾರ್ಯಕ್ರಮವೊಂದರಲ್ಲಿ ಮಾತನಾಡುವಾಗ ಹೀಗೆ ತಮ್ಮ ವಿಷಾದ ವ್ಯಕ್ತ ಪಡಿಸಿದ್ದಾರೆ. “ಇತ್ತೀಚಿನ ದಿನಗಳಲ್ಲಿ ಅತೀ ಕಡಿಮೆ ಸಂಖ್ಯೆಯ ಬಾಲಿವುಡ್ ಚಿತ್ರಗಳಿಗೆ ಸಂಗೀತ ಸಂಯೋಜಿಸಿದ್ದೇನೆ. ಕೆಲವು ದಿನಗಳ ಹಿಂದೆ ಸುಶಾಂತ್ ಸಿಂಗ್ ರಜಪೂತ್ ಅವರ “ದಿಲ್ ಬೆಚರಾ’ ಚಿತ್ರದ ಹಂಸಗೀತೆಗೆ ನಾನು ಸಂಗೀತ ಸಂಯೋಜಿಸಿದ್ದೇನೆ. ನಾನು ಒಳ್ಳೆಯ ಚಲನಚಿತ್ರಗಳನ್ನು ಯಾವತ್ತೂ ತಿರಸ್ಕರಿಸಿಲ್ಲ, ಆದರೆ ಒಂದು ಗ್ಯಾಂಗ್ ಇದೆ, ಅದು ತಪ್ಪು ಗ್ರಹಿಕೆಯಿಂದಾಗಿ ಸುಳ್ಳು ವದಂತಿಗಳನ್ನು ಹರಡುತ್ತಿದೆ ಎಂದಿದ್ದಾರೆ.
ವಿಷಾದ ವ್ಯಕ್ತ ಪಡಿಸಿದ ಎ.ಆರ್.ರೆಹಮಾನ್
Please follow and like us: