85 ವರ್ಷದ ವೃದ್ಧರೊಬ್ಬರು ಕೋವಿಡ್-19 ಸೋಂಕು ತಗುಲಿ ಮೃತಪಟ್ಟಿದ್ದರು. ಸಾವಿಗೂ ಮುನ್ನ ಮೃತ ವೃದ್ಧ ಕನಕಪುರದ ಎಂ.ಜಿ ರಸ್ತೆಯಲ್ಲಿರುವ ನವೋದಯ ಆರೋಗ್ಯ ಕೇಂದ್ರ ಡಾ.ಚೇತನ್ ಟೇಂಕರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಈ ಹಿನ್ನಲೆಯಲ್ಲಿ ಇದೀಗ ಚಿಕಿತ್ಸೆ ನೀಡಿದ ಖಾಸಗಿ ವೈದ್ಯ ದಂಪತಿಗೆ ಸೋಂಕು ದೃಢಪಟ್ಟಿದೆ. ಇವರಿಬ್ಬರೂ ವೈದ್ಯರಾದ ಕಾರಣ ಇವರ ಬಳಿ ಚಿಕಿತ್ಸೆ ಪಡೆದ ನಾಗರೀಕರು ಸ್ವಯಂ ಕ್ವಾರಂಟೈನ್ ಗೆ ಒಳಗಾಗಲು ಕನಕಪುರದ ಸ್ಥಳೀಯ ಆಡಳಿತ ಸೂಚನೆ ಹೊರೆಡಿಸದೆ. ಜೂನ್ 6 ರಿಂದ ಈವರೆಗೆ ಈ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿರುವ ಎಲ್ಲರೂ ಸ್ವಯಂ ಪ್ರೇರಿತರಾಗಿ ಕ್ವಾರಂಟೈನ್ ಗೆ ಒಳಗಾಗಬೇಕು ಎಂದು ಕನಕಪುರ ನಗರಸಭೆಯ ಆಯುಕ್ತರು ಸಾರ್ವಜನಿಕ ಪ್ರಕಟಣೆ ಹೊರಡಿಸಿದ್ದಾರೆ.