ವೈರಸ್ ಗೆ ಜಾತಿ, ಮತ ಇಲ್ಲ: ಕಟೀಲ್

ವೈರಸ್ ಗೆ ಜಾತಿ, ಮತ ಇಲ್ಲ. ಕೊರೊನಾ ನಿಯಂತ್ರಣಕ್ಕಾಗಿ ದೇಶದಲ್ಲಿ ದಿಟ್ಟ ಕ್ರಮ ಕೈಗೊಳ್ಳಲಾಗುತ್ತಿದೆ. ಈ ನಡುವೆ ಪಾದರಾಯನಪುರದಲ್ಲಿ ಆಗಿದ್ದು ರಾಷ್ಟ್ರ ವಿರೋಧಿ ಕೃತ್ಯ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು, ಪಾದರಾಯನಪುರದಲ್ಲಿ ಕಾನೂನು ವಿರೋಧಿಗಳಿಂದ ಘಟನೆ ನಡೆದಿದೆ. ಇದೊಂದು ಪ್ರಜಾಪ್ರಭುತ್ವ ವಿರೋಧಿ ಕೃತ್ಯ. ಈ‌ ಕುರಿತು ನಾನು ಗೃಹ ಸಚಿವರ ಜೊತೆಗೆ ಮಾತನಾಡಿದ್ದೇನೆ. ಪಾದರಾಯನಪುರದಲ್ಲಿ ಇನ್ನು ಮುಂದೆ ಅಂತಹ ಘಟನೆ ನಡೆಯಬಾರದು. ಕೃತ್ಯ ಎಸಗಿದವರ ವಿರುದ್ಧ ರಾಷ್ಟ್ರದ್ರೋಹದ ಕೇಸ್ ಹಾಕಿ ಜೈಲಿಗಟ್ಟಿ, ಉತ್ತರ ಪ್ರದೇಶ ಮಾದರಿಯಲ್ಲಿ ಆರೋಪಿಗಳ ಆಸ್ತಿಗಳನ್ನು ಮುಟ್ಟುಗೋಲು ಹಾಕಿ, ಸರ್ಕಾರಿ ಅಧಿಕಾರಿಗಳ ವಿರುದ್ಧ ಹೋಗಿದ್ದು ಖಂಡನೀಯ, ಘಟನೆ ಹಿಂದೆ ಯಾರೇ ಇರಲಿ, ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು

 

Please follow and like us:

Leave a Reply

Your email address will not be published. Required fields are marked *

Next Post

ಗೂಂಡಾಗಿರಿ ನಡೆಸಿದ್ರೆ ಹುಷಾರ್ -  ಆರ್ ,ಅಶೋಕ್

Mon Apr 20 , 2020
ಪಾದರಾಯನಪುರದಲ್ಲಿ ಗೂಂಡಾಗಿರಿ ಪ್ರದರ್ಶನ ಮಾಡಿದವರ ವಿರುದ್ದ ಸರ್ಕಾರ ‌ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ. ಇಂದು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪಾದರಾಯನಪುರದಲ್ಲಿ  ನಡೆದ ಘಟನೆ ಕುರಿತು ಪ್ರತಿಕ್ರಿಯಸಿದ ಅವರು ಇಂತಹ ರಾಕ್ಷಸೀ ಪ್ರವೃತ್ತಿಯನ್ನು ಸರ್ಕಾರ ಸಹಿಸಲ್ಲ.‌ ಹೆಚ್ಚುವರಿ ಪೊಲೀಸ್ ಬಂದೋಬಸ್ತ್ ಮಾಡುವ ಜತೆಗೆ ಕಿಡಿಗೇಡಿಗಳು ಹಾಗೂ ಗೂಂಡಾಗಿರಿ ಪ್ರವೃತ್ತಿಗೆ ಸಂಪೂರ್ಣ ಕಡಿವಾಣ‌ ಹಾಕುತ್ತೇವೆ ಎಂದು ಹೇಳಿದರು.   Please follow and like us:

Advertisement

Wordpress Social Share Plugin powered by Ultimatelysocial