ಶಿವಮೊಗ್ಗ: ಶಿಕ್ಷಕಿ ಮೇಲೆ ಹಲ್ಲೆ ನಡೆಸಿ ಮಾಂಗಲ್ಯಸರ ದೋಚಿದ ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಬ್ರಾಹ್ಮಣ ಮಂಚಾಲೆ ಗ್ರಾಮದಲ್ಲಿ ನಡೆದಿದೆ.
ಬ್ರಾಹ್ಮಣ ಮಂಚಾಲೆ ತ್ರಾಲಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಪ್ರಭಾವತಿ ಅವರು ಹಲ್ಲೆಗೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಬಸ್ ನಿಂದ ಇಳಿದು ಅರಣ್ಯಪ್ರದೇಶವನ್ನು ದಾಟಿ ಶಾಲೆ ಕಡೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಮುಖಕ್ಕೆ ಬಟ್ಟೆ ಸುತ್ತಿಕೊಂಡು ಬಂದಿದ್ದ ವ್ಯಕ್ತಿಯೊಬ್ಬ ಹಲ್ಲೆ ನಡೆಸಿ ಮಾಂಗಲ್ಯ ಸರ ದೋಚಿ ಪರಾರಿಯಾಗಿದ್ದಾನೆ. ಗಾಯಗೊಂಡ ಪ್ರಭಾವತಿ ಅವರನ್ನು ನಗರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ದುಷ್ಕರ್ಮಿ ಬಂಧನಕ್ಕೆ ಬಲೆ ಬೀಸಿದ್ದಾರೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada
Please follow and like us:
Thu Mar 24 , 2022
ಹರ್ಷ್ಯ ಕೊಲೆ ಆರೋಪಿಗಳು ಬೆಂಗಳೂರು ಪರಪ್ಪನ ಅಗ್ರಹಾರಕ್ಕೆ ಶಿಫ್ಟ್ಶಿವಮೊಗ್ಗ: ಬಂಜರಗದಳ ಹರ್ಷ ಕೊಲೆ ಪ್ರಕರಣಕ್ಕೆ ಸಂಭಂದಿಸಿದ್ದಂತೆ ತನಿಕೆ ಚುರುಕುಗೊಂಡಿದ್ದು, ಆರೋಪಿಗಳನ್ನು ಶೀಘ್ರವೇ ಬೆಂಗಳೂರು ಜೈಲಿಗೆ ಶಿಫ್ಟ್ ಮಾಡುವ ಸಾಧ್ಯತೆಯಿದೆ.ಈ ಪ್ರಕರಣವು ಯುಎಪಿಎ ಆಯಕ್ಟ್ ಅಳವಡಿಕೆಯಾದ ಹಿನ್ನೆಲೆಯಲ್ಲಿ ಪ್ರಕರಣವನ್ನು ಎನ್ಐಎಗೆ ಶಿಫ್ಟ್ ಮಾಡಲಾಗಿದ್ದು, ಈಗಾಗಲೇ ತನಿಖೆಯ ಪ್ರಥಮ ಹಂತವೂ ಆರಂಭಗೊಂಡಿದೆ. ಹಾಗೇ ಎನ್ಐಎ ವಿಶೇಷ ನ್ಯಾಯಾಲಯದ ಮೂಲಕ ಪ್ರಕರಣದ ಆರೋಪಿಗಳನ್ನು ಬೆಂಗಳೂರು ಜೈಲಿಗೆ ಸ್ಥಳಾಂತರ ಮಾಡಿಸಿಕೊಳ್ಳಲಾಗುತ್ತಿದೆ. ಕೊಲೆ ಆರೋಪಿಗಳ ಪೈಕಿ […]