ಶಿರಸಿ ಜಿಲ್ಲೆ ರಚನೆಗೆ ವೈಯಕ್ತಿಕ ಅಭ್ಯಂತರವಿಲ್ಲ: ಶಿವರಾಮ್‌ ಹೆಬ್ಬಾರ್

 

ಉತ್ತರ ಕನ್ನಡ ಜಿಲ್ಲೆಯನ್ನು ವಿಭಜಿಸಿ ಶಿರಸಿ ಪ್ರತ್ಯೇಕ ಜಿಲ್ಲೆ ರಚಿಸಲು ವೈಯಕ್ತಿಕ ಅಭ್ಯಂತರವಿಲ್ಲ. ಆದರೆ, ಹೊಸ ಜಿಲ್ಲೆ ಇಬ್ಭಾಗಿಸುವ ಯಾವುದೇ ಪ್ರಸ್ತಾಪ ಸದ್ಯಕ್ಕೆ ಚರ್ಚೆಗೆ ಬಂದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ ಹೇಳಿದರು. ನಗರದಲ್ಲಿ ಮಾತನಾಡಿದ ಅವರು, ಜಿಲ್ಲೆಯನ್ನು ಇಬ್ಭಾಗಿಸುವ ಮುನ್ನ ಪಕ್ಷಾತೀತವಾಗಿ ವಿವಿಧ ಕ್ಷೇತ್ರಗಳ ಪ್ರಮುಖರ ಜತೆ ಚರ್ಚೆ ನಡೆಸಬೇಕು. ಜನರ ಒಟ್ಟಾರೆ ಅಭಿಪ್ರಾಯ ಸಂಗ್ರಹವಾಗಬೇಕು. ಶಾಸಕರು, ಸಂಸದರು ಸೇರಿದಂತೆ ಜನಪ್ರತಿನಿಧಿಗಳ ಜತೆ ನಾನು ಕುರಿತು ಈವರೆಗೆ ಚರ್ಚಿಸಿಲ್ಲ ಎಂದರು. ಜಿಲ್ಲೆಯಲ್ಲಿ ನನಗಿಂತ ಹಿರಿಯ ರಾಜಕಾರಣಿಗಳಿದ್ದಾರೆ. ಹೊಸ ಜಿಲ್ಲೆ ರಚನೆಗೆ ಅವರ ಅಭಿಪ್ರಾಯವೂ ಮುಖ್ಯವಾಗುತ್ತದೆ ಎಂದು ಹೇಳಿದರು..

 

 

Please follow and like us:

Leave a Reply

Your email address will not be published. Required fields are marked *

Next Post

ಡ್ರಗ್ಸ್‌ ದಂಧೆ ಬಗ್ಗೆ ಆರೋಪಿ ತಂದೆಯ ದಂಗಲ್‌ ಉತ್ತರ

Tue Oct 5 , 2021
ಬಾಲಿವುಡ್ ಖ್ಯಾತ ನಟ ಶಾರುಖ್​ ಖಾನ್​ ಪುತ್ರ ಆರ್ಯನ್​ ಖಾನ್​ ಮತ್ತು ಸಹ ಆರೋಪಿಗಳು ಎನ್ ಸಿ ಬಿ ವಶದಲ್ಲಿದ್ದಾರೆ.ಮೂವರು ಪ್ರಮುಖ ಆರೋಪಿಗಳನ್ನು ಅಕ್ಟೋಬರ್ 11ರ ವರೆಗೆ ವಶಕ್ಕೆ ಕೊಡುವಂತೆ ಎನ್ ಸಿ ಬಿ ಮನವಿ ಮಾಡಿತ್ತು. ಆದರೆ ನ್ಯಾಯಾಲಯ ಅಕ್ಟೋಬರ್ 7ರ ವರೆಗೆ ಮಾತ್ರ ವಿಸ್ತರಿಸಿದೆ.ಆರ್ಯನ್ ಗೆಳೆಯ, ಸಹ ಆರೋಪಿ ಅರ್ಬಾಜ್ ಮರ್ಚಂಟ್ ತಂದೆ ಈ ಬಗ್ಗೆ ಮೊದಲ ಬಾರಿಗೆ ಮೌನ ಮುರಿದಿದ್ದಾರೆ. ಮಾಧ್ಯಮದ ಜೊತೆ ಮಾತನಾಡಿರುವ ಅವರು, […]

Advertisement

Wordpress Social Share Plugin powered by Ultimatelysocial