ಶಿವಾಜಿನಗರದಲ್ಲಿ ೨೦೦ ಹಾಸಿಗೆಗಳ ಕೋವಿಡ್ ಕೇರ್ ಆರಂಭ

ಶಿವಾಜಿನಗರದ ಬಳಿ ಕೊರೊನಾ ರೋಗಿಗಳ ಚಿಕಿತ್ಸೆಗೆ ಸುಮಾರು ೨೦೦ ಹಾಸಿಗೆಗೆಳ ಕೊರೊನಾ ಕೇರ್ ಶೀಘ್ರವೇ ಆರಂಭವಾಗಲಿದೆ ಅಂತ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಹೇಳಿದ್ದಾರೆ ಆಸ್ಪತ್ರೆ ನಿರ್ಮಿಸಲು ಇನ್ಫೋಸಿಸ್ ಪ್ರತಿಷ್ಠಾನ ನೆರವು ನೀಡಿದ್ದು ಸುಧಾಮೂರ್ತಿಯವರಿಗೆ ಜನತೆಯ ಪರವಾಗಿ ಕೃತಜತೆ ಸಲ್ಲಿಸುತ್ತೇನೆ ಎಂದು ಸುಧಾಕರ್ ಹೇಳಿದ್ದಾರೆ. ಬ್ರಾಡ್ ವೇ ರಸ್ತೆಯ ಬಳಿ ಬಿಬಿಎಂಪಿ ಕಟ್ಟಡದಲ್ಲಿ ಆಸ್ಪತ್ರೆಯನ್ನು ನಿರ್ಮಿಸಲಾಗುತ್ತಿದೆ. ಕೊರೊನಾ ರೋಗಿಗಳಿಗಾಗಿ ಈ ಆಸ್ಪತ್ರೆ ನಿರ್ಮಾಣವಾಗುತ್ತಿದ್ದು, ಹಾಸಿಗೆ, ವೆಂಟಿಲೇಟರ್, ಆಕ್ಸಿಜನ್ ಮೊದಲಾದ ಮೂಲಸೌಕರ್ಯ ಕಲ್ಪಿಸಲಾಗುತ್ತಿದೆ. ಜತೆಗೆ ಸಿಬ್ಬಂದಿ ನಿಯೋಜನೆಯೂ ಮಾಡಲಾಗಿದೆ. “ಬ್ರಾಡ್ ವೇ ರಸ್ತೆ ಬಳಿ ೨೦೦ ಹಾಸಿಗೆಗಳ ಕೋವಿಡ್ ಆಸ್ಪತ್ರೆ ಸಿದ್ಧವಾಗುತ್ತಿದೆ. ಇದರ ಸಮರ್ಪಕ ನಿರ್ವಹಣೆಗೆ ಅಗತ್ಯವಿರುವ ವೈದ್ಯರು, ಶುಶ್ರೂಷಕರು ಮತ್ತು ಅರೆ ವೈದ್ಯಕೀಯ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಇನ್ನು ಎರಡು ವಾರದೊಳಗೆ ಕಾರ್ಯಾರಂಭಗೊಳ್ಳಲಿದೆ” ಎಂದು ಸಚಿವರು ಹೇಳಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಕಾಂಗ್ರೆಸ್ ಸಂಸದ ಶಶಿ ತರೂರ್ ಟ್ವೀಟ್ ಸರ್ಕಾರಿ ಆಸ್ಪತ್ರೆ ಬಿಟ್ಟು ಖಾಸಗಿ ಆಸ್ಪತ್ರೆಗೆ ಎಕೆ ದಾಖಲಾ

Mon Aug 3 , 2020
ಸರ್ಕಾರಿ ಆಸ್ಪತ್ರೆ ಬಿಟ್ಟು ಖಾಸಗಿ ಆಸ್ಪತ್ರೆಗೇಕೆ ದಾಖಲಾದರು ಕಾಂಗ್ರೆಸ್ ಸಂಸದ ಶಶಿ ತರೂರ್ ಟ್ವೀಟ್ ಅಮೀತ್ ಶಾ ವಿರುದ್ಧ ಟ್ವೀಟ್ ಪ್ರಹಾರ ನಡೆಸಿದ ತರೂರ್ ಕೊರೊನಾ ಸೋಂಕಿಗೀಡಾಗಿರುವ ಕೇಂದ್ರ ಗೃಹಸಚಿವ ಅಮಿತ್ ಶಾ ಸರ್ಕಾರಿ ಆಸ್ಪತ್ರೆ ಬಿಟ್ಟು ಖಾಸಗಿ ಆಸ್ಪತ್ರೆಗೆ ಎಕೆ ದಾಖಲಾದರು ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು ಪ್ರಶ್ನಿಸಿದ್ದಾರೆ. ಟ್ವೀಟ್‌ರ್ ನಲ್ಲಿ ಟ್ವೀಟ್ ಮಾಡಿರುವ ಶಶಿ ತರೂರ್ ನಮ್ಮ ಗೃಹ ಸಚಿವರು ಅನಾರೋಗ್ಯಕ್ಕೀಡಾದಾಗ ಏಮ್ಸ್ ಆಸ್ಪತ್ರೆಯನ್ನು […]

Advertisement

Wordpress Social Share Plugin powered by Ultimatelysocial