ಶೋಯೆಬ್ ಅಖ್ತರ್ ವಿರುದ್ಧ ಮಾನನಷ್ಟ ಮೊಕದ್ದಮೆ

ಪಾಕಿಸ್ತಾನ ಮಾಜಿ ಕ್ರಿಕೆಟಿಗ ಶೋಯೇಬ್ ಅಖ್ತರ್ ಮತ್ತೆ ಸಮಸ್ಯೆಯಲ್ಲಿದ್ದಾರೆ. ಪಾಕಿಸ್ತಾನ ಕ್ರಿಕೆಟ್ ಬೋರ್ಡ್ನ (ಪಿಸಿಬಿ) ಕಾನೂನು ಸಲಹೆಗಾರ ತಫಝುಲ್ ರಿಝ್ವಿ ಅಖ್ತರ್ ವಿರುದ್ಧ ಕ್ರಿಮಿನಲ್ ಕೇಸ್ ಮತ್ತು ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. ತನ್ನ ಯೂಟ್ಯೂಬ್ ಚಾನೆಲ್ ಮೂಲಕ ಆಗಾಗ ಕಾಣಿಸಿಕೊಳ್ಳುವ ರಾವಲ್ಪಿಂಡಿ ಎಕ್ಸ್ಪ್ರೆಸ್ ಶೋಯೆಬ್ ಅಖ್ತರ್, ಪ್ರತೀಸಾರಿಯೂ ಏನಾದರೊಂದು ವಿಚಾರ ಮುಂದಿಟ್ಟು ಅಭಿಪ್ರಾಯ ಹಂಚಿಕೊಳ್ಳುತ್ತಿರುತ್ತಾರೆ. ಯೂಟ್ಯೂಬ್ ಚಾನೆಲ್ ಮೂಲಕ ಅಖ್ತರ್ ಅಸಮಂಜಸ ಕಾಮೆಂಟ್ಗಳನ್ನು ಮಾಡಿದ್ದಾರೆಂದು ಆರೋಪಿಸಿರುವ ರಿಝ್ವಿ ದೂರು ದಾಖಲಿಸಿದ್ದಾರೆ. ಅಜ್ಮಲ್ ಪಾಕ್ ಕ್ರಿಕೆಟ್ ಬೋರ್ಡ್ಗೆ ಕಾನೂನು ಸಲಹೆಗಾರರಾಗಿ ಕಾರ್ಯ ನಿರ್ವಹಿಸುತ್ತಿರುವ ರಿಝ್ವಿ, ತಾನು ಅಖ್ತರ್ ವಿರುದ್ಧ ಮಾನನಷ್ಟ ಮೊಕದ್ದಮೆ ಮತ್ತು ಕ್ರಿಮಿನಲ್ ದೂರು ದಾಖಲಿಸಿರುವುದಾಗಿ ಸ್ಪಷ್ಟವಾಗಿ ಹೇಳಿಕೊಂಡಿದ್ದಾರೆ. ಅಲ್ಲದೆ ಸೈಬರ್ ಕ್ರೈಮ್ನ ಅಡಿಯಲ್ಲಿ ಫೆಡರಲ್ ಇನ್ವೆಸ್ಟಿಗೇಶನ್ ಏಜೆನ್ಸಿಗೂ ದೂರು ನೀಡಿದ್ದಾರೆ. ಉಮರ್ ಅಕ್ಮಲ್ಗೆ 3 ವರ್ಷಗಳ ನಿಷೇಧ ಹೇರಿರುವ ವಿವಾದಕ್ಕೆ ಸಂಬಂಧಿಸಿ ಅಖ್ತರ್ ವೀಡಿಯೋ ಮಾಡಿದ್ದರು. ಈ ವೀಡಿಯೋವನ್ನು ಪಾಕಿಸ್ತಾನ ಬಾರ್ ಕೌನ್ಸಿಲ್ ಅನ್ನು ಕೆರಳಿಸುವುದರೊಂದಿಗೆ ಕೊನೆಗೊಳಿಸಲಾಗಿತ್ತು. ಹೀಗಾಗಿ ಕಾನೂನಿಗೆ ಸಂಬಂಧಿಸಿದ ವಿಚಾರಗಳನ್ನು ಮಾತನಾಡುವಾಗ ಜಾಗರೂಕರಾಗಿರಿ ಎಂದು ಪಾಕಿಸ್ತಾನ ಬಾರ್ ಕೌನ್ಸಿಲ್ ಅಖ್ತರ್ ಗೆ ಎಚ್ಚರಿಸಿತ್ತು.

Please follow and like us:

Leave a Reply

Your email address will not be published. Required fields are marked *

Next Post

ವಿವಿಧ ರಾಜ್ಯಗಳ ವಲಸೆ ಕಾರ್ಮಿಕರಿಗೆ ಟ್ರೈನ್ ವ್ಯವಸ್ಥೆ

Fri May 1 , 2020
ಲಾಕ್‌ಡೌನ್‌ನಿಂದಾಗಿ ವಿವಿಧ ರಾಜ್ಯಗಳಲ್ಲಿ ಸಿಕ್ಕಿ ಹಾಕಿಕೊಂಡಿರುವ ವಲಸೆ ಕಾರ್ಮಿಕರನ್ನು ಮರಳಿ ಊರಿಗೆ ಕಳುಹಿಸಲು ಭಾರತೀಯ ರೈಲ್ವೆ ವಿಶೇಷ ರೈಲಿನ ವ್ಯವಸ್ಥೆ ಮಾಡಿದೆ. ತೆಲಂಗಾಣದಲ್ಲಿ ಸಿಲುಕಿ ಹಾಕಿಕೊಂಡಿದ್ದ ಜಾರ್ಖಂಡ್‌ನ 1200 ವಲಸೆ ಕಾರ್ಮಿಕರಿಗಾಗಿ ಒಂದು ವಿಶೇಷ ರೈಲನ್ನು ತೆಲಂಗಾಣದ ಲಿಂಗಂಪಲ್ಲಿಯಿಂದ ಶುಕ್ರವಾರ ಬೆಳಿಗ್ಗೆ 5.30ಕ್ಕೆ ಬಿಡಲಾಗಿದೆ. ಪ್ರತಿ ಬೋಗಿಯಲ್ಲಿ 54 ಪ್ರಯಾಣಿಕರಿಗೆ ಸೀಟು ವ್ಯವಸ್ಥೆ ಕಲ್ಪಿಸಲಾಗಿರುವ ಈ ರೈಲು ರಾತ್ರಿ 11ಕ್ಕೆ ಜಾರ್ಖಂಡ್‌ ನ ತಲುಪಲಿದೆ. ನಿಲುಗಡೆ ರಹಿತವಾದ ಈ ರೈಲು […]

Advertisement

Wordpress Social Share Plugin powered by Ultimatelysocial