ಶ್ರೀರಾಮುಲು ಅವರೇ ಸವಾಲ್ ಹಾಕ್ಬೇಡಿ

ಆರೋಗ್ಯ ಸಚಿವ ಶ್ರೀರಾಮುಲು ಪ್ರತಿಪಕ್ಷಗಳಿಗೆ ಸವಾಲೆಸೆಯುವ ಮುನ್ನ ಯೋಚಿಸಿ ಮಾತನಾಡಲಿ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.  ವೈದ್ಯಕೀಯ ಉಪಕರಣ ಖರೀದಿಯಲ್ಲಿ ಲೂಟಿಹೊಡೆದಿದ್ದರೆ ದಾಖಲೆ ಬಿಡುಗಡೆ ಮಾಡಲಿ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯಗೆ ಸವಾಲು ಹಾಕಿದ್ದ ಆರೋಗ್ಯ ಸಚಿವ ಶ್ರೀರಾಮುಲು. ಈ ಕುರಿತು ಟ್ವೀಟ್‌ ಮೂಲಕ ಪ್ರತ್ಯುತ್ತರ ನೀಡಿದ ಸಿದ್ದರಾಮಯ್ಯ, ರಾಮುಲು ಅವರೇ, ಬಳ್ಳಾರಿಯ ನಿಮ್ಮ ಅಣ್ತಮ್ಮಂದಿರು ಇದೇ ರೀತಿ ಸವಾಲು ಹಾಕಿ ಕೊನೆಗೆ ದಾಖಲೆ ಬಿಡುಗಡೆ ಮಾಡಿದಾಗ ಜೈಲು ಸೇರಿದ್ದರು. ಸವಾಲೆಸೆಯುವಾಗ ಇದು ನಿಮ್ಮ ಗಮನದಲ್ಲಿರಲಿ ಎಂದು ಎಚ್ಚರಿಕೆ ನೀಡಿದ್ದಾರೆ.

 

Please follow and like us:

Leave a Reply

Your email address will not be published. Required fields are marked *

Next Post

ಕೊರೊನಾ ಬಗ್ಗೆ ಆತಂಕ ಬೇಡ ಸಚಿವ ಡಾ. ಸುಧಾಕರ್ ಸಲಹೆ

Mon Jul 6 , 2020
ಮಳೆಗಾಲ ಪ್ರಾರಂಭವಾಗಿರುವುದರಿಂದ ಶೀತ ಜ್ವರ, ನೆಗಡಿ, ಕೆಮ್ಮು ಬರುವುದು ಸಾಮಾನ್ಯ. ಇದರಿಂದ ಜನರು ಆತಂಕಕ್ಕೆ ಒಳಗಾಗಬಾರದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಸಲಹೆ ನೀಡಿದ್ದಾರೆ. ಹಾಗೆಯೇ ಯಾವುದೇ ರೀತಿಯ ರೋಗದ ಲಕ್ಷಣ ಕಂಡುಬಂದ ಕೂಡಲೇ ಹತ್ತಿರದ ಫೀವರ್ ಕ್ಲಿನಿಕ್‍ಗೆ ಭೇಟಿ ನೀಡಿ ವೈದ್ಯರ ಸಲಹೆ ಪಡೆಯಿರಿ ಎಂದು ಟ್ವೀಟ್ ಮೂಲಕ ಜನರಿಗೆ ಸಲಹೆ ನೀಡಿದ್ದಾರೆ. ಅದಲ್ಲದೇ ಪ್ರಾಥಮಿಕ ಹಂತದಲ್ಲೇ ಎಚ್ಚರ ವಹಿಸಿದರೆ ಚಿಕಿತ್ಸೆ ಸುಲಭವಾಗಲಿದೆ. ಕೊರೊನಾ ಬಗ್ಗೆ […]

Advertisement

Wordpress Social Share Plugin powered by Ultimatelysocial