ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ಮಾಜಿ ಸಿಇಓ ಆತ್ಮಹತ್ಯೆ

ಗ್ರಾಹಕರ ಸಾವಿರಾರು ಕೋಟಿ ರೂ. ಹಣ ದುರ್ಬಳಕೆ ಮಾಡಿಕೊಂಡಿದ್ದ ಆರೋಪದ ಮೇಲೆ ಎಸಿಬಿ ದಾಳಿಗೊಳಗಾಗಿದ್ದ ಬಸವನಗುಡಿಯ ಶ್ರೀಗುರು ರಾಘವೇಂದ್ರ ಸಹಕಾರ ಬ್ಯಾಂಕ್ ನಿಯಮಿತದ ಮಾಜಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವಾಸುದೇವಮಯ್ಯ ಅವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸುಬ್ರಹ್ಮಣ್ಯಪುರದ ಪೂರ್ಣಪ್ರಜ್ಞಾ ಲೇಔಟ್‌ನ ರಸ್ತೆಯಲ್ಲಿ ಕಾರಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮದ್ಯಕ್ಕೆ ವಿಷ ಬೆರೆಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಆದರೆ, ಈ ಬಗ್ಗೆ ಸ್ಪಷ್ಟತೆ ಇಲ್ಲ. ವಿಧಿ ವಿಜ್ಞಾನ ಪ್ರಯೋಗಾಲಯದ ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ ಎಂದು ಪೊಲೀಸರು ಹೇಳಿದರು. ಸ್ಥಳಕ್ಕೆ ದಕ್ಷಿಣ ವಿಭಾಗದ ಡಿಸಿಪಿ ರೋಹಿಣಿ ಕಟೋಚ್ ಸೆಪಟ್, ಸುಬ್ರಹ್ಮಣ್ಯಪುರ ಪೊಲೀಸರು, ವಿಧಿ ವಿಜ್ಞಾನ ಪರೀಕ್ಷಾ ಕೇಂದ್ರದ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು. ಪ್ರಾಥಮಿಕ ವಿಚಾರಣೆಯಲ್ಲಿ ವಾಸುದೇವ ಮಯ್ಯ ಅವರು ಎಸಿಬಿ ತನಿಖೆ ಹಾಗೂ ಇತ್ತೀಚೆಗೆ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿಗೆ ವರ್ಗಾವಣೆ ಮಾಡಿದ್ದರಿಂದ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.

Please follow and like us:

Leave a Reply

Your email address will not be published. Required fields are marked *

Next Post

ಬಿಜೆಪಿ ವಿರುದ್ಧ ಸಿದ್ಧರಾಮಯ್ಯ ಟೀಕೆ

Tue Jul 7 , 2020
ರಾಜ್ಯದಲ್ಲಿ ಕೋವಿಡ್ ೧೯ ಸಾಮುದಾಯಿಕವಾಗಿ ಹರಡಿದ್ದರೂ ಸರಿಯಾಗಿ ಸೋಂಕು ಪರೀಕ್ಷೆ ನಡೆಸದೇ ಜನರ ಸಾವಿಗೆ ಕಾರಣವಾಗಿರುವ ಬಿಜೆಪಿ ಸರ್ಕಾರವನ್ನು ಕೊಲೆಗಡುಕ ಸರ್ಕಾರ ಎಂದರೆ ತಪ್ಪಾಗುತ್ತದೆಯೇ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಸರ್ಕಾರ ಹೆಚ್ಚು ಪರೀಕ್ಷೆ ನಡೆಸಿದರೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತದೆ. ಸೋಂಕಿತರ ಸಂಖ್ಯೆಗನುಗುಣವಾಗಿ ಚಿಕಿತ್ಸೆಗೆ ವ್ಯವಸ್ಥೆ ಮಾಡಬೇಕಾಗುತ್ತದೆ ಎನ್ನುವ ಕಾರಣಕ್ಕೆ ಸರ್ಕಾರ ಸಮರ್ಪಕವಾಗಿ ಹೆಚ್ಚು ಪರೀಕ್ಷೆ ನಡೆಸದೇ ಜನರ ಸಾವಿಗೆ […]

Advertisement

Wordpress Social Share Plugin powered by Ultimatelysocial