ಮಧ್ಯಪ್ರದೇಶ ಮತ್ತು ರಾಜಸ್ಥಾನ ಕಾಂಗ್ರೆಸ್ ನಾಯಕರ ಭಿನ್ನಮತ ಸ್ಫೋಟಗೊಂಡ ಬೆನ್ನಲೆ ಈಗ ಜಾರ್ಖಂಡ ಸರ್ಕಾರಕ್ಕೆ ಬಂಡಾಯದ ಭೀತಿ ಎದುರಾಗಿದೆ. ಹೇಮಂತ್ ಸೊರೆನ್ ಅವರ ಜಾರ್ಖಂಡ ಮುಕ್ತಿ ಮೋರ್ಚಾ ಪಕ್ಷ ಆಡಳಿತಕ್ಕೆ ಬರಲು, ಪ್ರಮುಖ ಪಾತ್ರ ವಹಿಸಿದ್ದ ಕಾಂಗ್ರೆಸ್ ಸುಮಾರು ೧೫ ಶಾಸಕರು ಈಗ ಹೇಮಂತ್ ಆಡಳಿತದ ಬಗ್ಗೆ ಅಸಮಾಧಾನಗೊಂಡಿದ್ದಾರೆ. ರಾಜ್ಯ ಸರ್ಕಾರ ಕಾಂಗ್ರೆಸ್ ಪಾಳಯದ ಶಾಸಕರು ತಮ್ಮ ಅಸಮಾಧಾನವನ್ನು ಹೊರಹಾಕುತ್ತಿದ್ದಾರೆ. ರಾಜಸ್ಥಾನದಲ್ಲಿ ತಮ್ಮನ್ನು ಕಡೆಗಣಿಸಲಾಗುತ್ತಿದೆ ಎಂದು ಶಾಸಕರು ತಮ್ಮ ಸರ್ಕಾರದ ವಿರುದ್ಧವೇ ತಿರುಗಿಬಿದ್ದಿದ್ದರು. ಈಗ ಜಾರ್ಖಂಡ ರಾಜಕೀಯದಲ್ಲೂ ಅದೇ ಬೆಳವಣಿಗೆ ನಡೆಯುತ್ತಿದೆ.
ಸಂಕಷ್ಟದಲ್ಲಿ ಜಾರ್ಖಂಡ್ ರಾಜಕೀಯ
Please follow and like us: