ರಾಜ್ಯದಲ್ಲಿ ಕೊರೊನಾ ವೈರಸ್ ಭೀತಿಯಿಂದ ಕರ್ನಾಟಕದಲ್ಲಿ ಲಾಕ್ ಡೌನ್ ಹೇರಲಾಗಿತ್ತು ಆದರೆ ಇದೀಗ ಲಾಕ್ ಡೌನ್ ಅನ್ ಲಾಕ್ ಆಗಿದೆ ಇದರಿಂದ ಭಾರೀ ಪ್ರಮಾಣದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತಿದ್ದತ್ತೆ ಮತ್ತೆ ರಾಜ್ಯದಲ್ಲಿ ಲಾಕ್ ಡೌನ್ ಮಾಡುವ ಬಗ್ಗೆ ಸುದ್ದಿಕೇಳಿ ಬಂದಿತ್ತು. ಆದರೆ ಇದೀಗ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮತ್ತೆ ಲಾಕ್ ಡೌನ್ ಜಾರಿ ಮಾಡುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.ಹೀಗಾಗಿ ಚಿತ್ರಮಂದಿರ, ಜಿಮ್, ಬಾರ್ ಅಂಡ್ ರೆಸ್ಟೋರೆಂಟ್ ಸೇರಿದಂತೆ ಸೀಮಿತ ಕ್ಷೇತ್ರಗಳನ್ನು ಹೊರತುಪಡಿಸಿ ಇನ್ನುಳಿದಂತೆ ರಾಜ್ಯದಲ್ಲಿ ಎಲ್ಲ ಚಟುವಟಿಕೆಗಳೂ ಆರಂಭವಾಗಿವೆ. ಧಾರ್ಮಿಕ ಮಂದಿರಗಳು ಸಹ ತೆರೆದಿವೆ.ಸದ್ಯದಲ್ಲೇ ಚಿತ್ರಮಂದಿರ, ಬಾರ್ ಅಂಡ್ ರೆಸ್ಟೋರೆಂಟ್ ಹಾಗೂ ಜಿಮ್ ಕೂಡ ಆರಂಭವಾಗುತ್ತದೆ ಎಂದು ಹೇಳಿದ್ದಾರೆ. ಲಾಕ್ ಡೌನ್ ಸಡಿಲಿಕೆ ಬಳಿಕವೂ ರಾಜ್ಯ ಸರ್ಕಾರಕ್ಕೆ ನಿರೀಕ್ಷಿತ ಮಟ್ಟದಲ್ಲಿ ಆದಾಯ ಬಾರದಿರುವ ಹಿನ್ನಲೆಯಲ್ಲಿ ಸಂಪೂರ್ಣವಾಗಿ ಅನ್ ಲಾಕ್ ಮಾಡಲಾಗುವುದು ಎಂದು ಹೇಳಲಾಗಿದೆ.