ಭ್ರಷ್ಟಾಚಾರದ ಬಿಲ ಎಲ್ಲೆಲ್ಲಿ ಇವೆ ಅಂತಾ ಕಾಂಗ್ರೆಸ್ನವರಿಗೆ ಗೊತ್ತಿದೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು,ಭ್ರಷ್ಟಾಚಾರದ ಬಿಲ ಎಲ್ಲೆಲ್ಲಿ ಇವೆ ಅಂತಾ ಕಾಂಗ್ರೆಸ್ನವರಿಗೆ ಗೊತ್ತಿದೆ. ಏಕೆಂದ್ರೆ ಆ ಬಿಲ ಸೃಷ್ಟಿ ಮಾಡಿದವರೆ ಕಾಂಗ್ರೆಸಿಗರು. ಎಲ್ಲಿ ಹೇಗೆ ಭ್ರಷ್ಟಾಚಾರ ಮಾಡಬಹುದು ಎಂಬುದು ಅವರಿಗೆ ಚೆನ್ನಾಗಿ ಅನುಭವವಿದೆ. ಇದೇ ಅನುಭವ ಇಟ್ಟುಕೊಂಡು ಸದನದಲ್ಲಿ ಈ ಬಗ್ಗೆ ಚರ್ಚೆ ಮಾಡಲಿ.
ಸದ್ಯ ಕೊರೊನಾ ಸೋಂಕಿತರ ಜೀವ ಉಳಿಸುವ ಕೆಲಸ ಮಾಡಬೇಕಿದೆ. ಲೆಕ್ಕ ಎಲ್ಲೂ ಹೋಗಲ್ಲ, ಸದನ ಕರೆದಾಗ ಲೆಕ್ಕ ಕೊಡುತ್ತೇವೆ. ಇದು ಸರಕಾರಕ್ಕೆ ಸಹಕಾರ ಕೊಡುವ ಸಮಯ, ಲೆಕ್ಕ ಕೇಳುವ ಸಮಯವಲ್ಲ. ವಿಪಕ್ಷಗಳು ಇದನ್ನು ಅರ್ಥ ಮಾಡಿಕೊಳ್ಳಲಿ ಎಂದು ಹೇಳಿದರು